ಹಣಕಾಸಿನ ಅವ್ಯವಹಾರ: ಕಸಾಪ ಅಧ್ಯಕ್ಷ ಮಹೇಶ ಜೋಷಿ ವಿರುದ್ಧ ತನಿಖೆಗೆ ಆದೇಶ

ಬೆಂಗಳೂರು: ಹಣಕಾಸಿನ ಅವ್ಯವಹಾರ ಸೇರಿದಂತೆ ವಿವಿಧ ಆರೋಪಗಳಿಗೆ ಸಂಬಂಧಿಸಿದಂತೆ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಹೇಶ್‌ ಜೋಷಿ ವಿರುದ್ಧ ತನಿಖೆ ನಡೆಸಲು ಆರು ಅಧಿಕಾರಿಗಳ ತಂಡವನ್ನು ರಚಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.

ತನಿಖಾ ಸಮಿತಿಯಲ್ಲಿ ಸಹಕಾರ ಸಂಘಗಳ ನಿಬಂಧಕರು, ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಶಾಖೆ ಜಂಟಿ ನಿರ್ದೇಶ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಇಬ್ಬರು ಜಂಟಿ ನಿರ್ದೇಶಕರು, ಲೆಕ್ಕಾಧಿಕಾರಿ ಹಾಗೂ ಪತ್ರಾಂಕಿತ ವ್ಯವಸ್ಥಾಪಕರಿದ್ದಾರೆ.  30 ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಆದೇಶದಲ್ಲಿ ಸೂಚನೆ ನೀಡಲಾಗಿದೆ.

ಕಸಾಪ ಅಧ್ಯಕ್ಷ ಮಹೇಶ ಜೋಶಿ ಅವರ ವಿರುದ್ಧ ಅನೇಕ ದೂರುಗಳು ಸಲ್ಲಿಕೆಯಾಗಿವೆ. ಅವರ ಅವಧಿಯಲ್ಲಿ ಹಣಕಾಸಿನ ಅವ್ಯವಹಾರ ನಡೆದಿದೆ. ವಿನಾಕಾರಣ ಕಸಾಪ ಸದಸ್ಯರಿಗೆ ನೋಟಿಸ್‌ ನೀಡಿ ಕಿರುಕುಳ ನೀಡುತ್ತಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಅವರು ನಡೆಸಿದ ಹಣಕಾಸಿನ ಅವ್ಯವಹಾರ ಹಾಗೂ ಸರ್ವಾಧಿಕಾರಿ ಧೋರಣೆ ವಿರುದ್ಧ ತನಿಖೆ ನಡೆಸಿ, ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸುವಂತೆ ದೂರುದಾರರು ಆಗ್ರಹಪಡಿಸಿದ್ದಾರೆ ಎಂದು ಹೇಳಲಾಗಿದೆ.

ಕಸಾಪಗೆ ಕೂಡಲೇ ಆಡಳಿತಾಧಿಕಾರಿಯನ್ನು ನೇಮಿಸಲು ದೂರುದಾರರು ಒತ್ತಾಯಿಸಿದ್ದಾರೆ.  ಅಧ್ಯಕ್ಷರ ಅಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲು ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸುವಂತೆಯೂ ಸರ್ಕಾರವನ್ನು ಒತ್ತಾಯಿಸಿದ್ದಾರೆ. ದೂರುಗಳಿಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ಅಧಿಕಾರಿಗಳ ಸಮಿತಿ ರಚಿಸುವಂತೆ ಮನವಿ ಮಾಡಲಾಗಿತ್ತು. ಆದ್ದರಿಂದ ತನಿಖೆಗೆ ಸಮಿತಿ ರಚಿಸಲಾಗಿದೆ ಎಂದು ತಿಳಿಸಲಾಗಿದೆ.

ಬೆಂಗಳೂರು: ಹಣಕಾಸಿನ ಅವ್ಯವಹಾರ ಸೇರಿದಂತೆ ವಿವಿಧ ಆರೋಪಗಳಿಗೆ ಸಂಬಂಧಿಸಿದಂತೆ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಹೇಶ್‌ ಜೋಷಿ ವಿರುದ್ಧ ತನಿಖೆ ನಡೆಸಲು ಆರು ಅಧಿಕಾರಿಗಳ ತಂಡವನ್ನು ರಚಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.

ತನಿಖಾ ಸಮಿತಿಯಲ್ಲಿ ಸಹಕಾರ ಸಂಘಗಳ ನಿಬಂಧಕರು, ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಶಾಖೆ ಜಂಟಿ ನಿರ್ದೇಶ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಇಬ್ಬರು ಜಂಟಿ ನಿರ್ದೇಶಕರು, ಲೆಕ್ಕಾಧಿಕಾರಿ ಹಾಗೂ ಪತ್ರಾಂಕಿತ ವ್ಯವಸ್ಥಾಪಕರಿದ್ದಾರೆ.  30 ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಆದೇಶದಲ್ಲಿ ಸೂಚನೆ ನೀಡಲಾಗಿದೆ.

ಕಸಾಪ ಅಧ್ಯಕ್ಷ ಮಹೇಶ ಜೋಶಿ ಅವರ ವಿರುದ್ಧ ಅನೇಕ ದೂರುಗಳು ಸಲ್ಲಿಕೆಯಾಗಿವೆ. ಅವರ ಅವಧಿಯಲ್ಲಿ ಹಣಕಾಸಿನ ಅವ್ಯವಹಾರ ನಡೆದಿದೆ. ವಿನಾಕಾರಣ ಕಸಾಪ ಸದಸ್ಯರಿಗೆ ನೋಟಿಸ್‌ ನೀಡಿ ಕಿರುಕುಳ ನೀಡುತ್ತಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಅವರು ನಡೆಸಿದ ಹಣಕಾಸಿನ ಅವ್ಯವಹಾರ ಹಾಗೂ ಸರ್ವಾಧಿಕಾರಿ ಧೋರಣೆ ವಿರುದ್ಧ ತನಿಖೆ ನಡೆಸಿ, ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸುವಂತೆ ದೂರುದಾರರು ಆಗ್ರಹಪಡಿಸಿದ್ದಾರೆ ಎಂದು ಹೇಳಲಾಗಿದೆ.

ಕಸಾಪಗೆ ಕೂಡಲೇ ಆಡಳಿತಾಧಿಕಾರಿಯನ್ನು ನೇಮಿಸಲು ದೂರುದಾರರು ಒತ್ತಾಯಿಸಿದ್ದಾರೆ.  ಅಧ್ಯಕ್ಷರ ಅಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲು ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸುವಂತೆಯೂ ಸರ್ಕಾರವನ್ನು ಒತ್ತಾಯಿಸಿದ್ದಾರೆ. ದೂರುಗಳಿಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ಅಧಿಕಾರಿಗಳ ಸಮಿತಿ ರಚಿಸುವಂತೆ ಮನವಿ ಮಾಡಲಾಗಿತ್ತು. ಆದ್ದರಿಂದ ತನಿಖೆಗೆ ಸಮಿತಿ ರಚಿಸಲಾಗಿದೆ ಎಂದು ತಿಳಿಸಲಾಗಿದೆ.

More articles

Latest article

Most read