ನಾನು ಸಚಿವನಾಗಿದ್ದಾಗಲೇ ಮುಡಾದಲ್ಲಿ ಹಗರಣ ನಡೆದಿತ್ತು, ಸರ್ಕಾರಕ್ಕೆ ಪತ್ರ ಬರೆದರೂ ಕ್ರಮ ಕೈಗೊಳ್ಳಲಿಲ್ಲ : ಶಾಸಕ ಎಸ್.ಟಿ. ಸೋಮಶೇಖರ್

Most read

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆಯುತ್ತಿದ್ದ ಪ್ರತಿ ಸಭೆಯಲ್ಲೂ ಸ್ಥಳೀಯ ಶಾಸಕರ ಫೈಲ್ ​ಗಳೇ ಹೆಚ್ಚಾಗಿರುತ್ತಿದ್ದವು. ಇದರ ಜೊತೆಗೆ ಈ ಫೈಲ್​ಗಳ ಬಗ್ಗೆ ಯಾವುದೇ ಸೂಕ್ತ ಚರ್ಚೆಯಾಗದೇ ಪಾಸ್​ ಆಗುತ್ತಿದ್ದವು. ಅಂದು ನಾನು ಪತ್ರ ಬರೆದು ಸರ್ಕಾರಕ್ಕೆ ಕ್ರಮ ಕೈಗೊಳ್ಳಲು ಹೇಳಿದ್ದೆ ಆದರೆ ಸರ್ಕಾರ ಈ ಕುರಿತು ಚಿಂತಿಸಿಲ್ಲ ಎಂದು ಹಾಲಿ ಶಾಸಕ ಹಾಗೂ ಮೈಸೂರಿನ ಮಾಜಿ ಉಸ್ತುವಾರಿ ಸಚಿವರೂ ಆಗಿದ್ದ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಇರುವುದು ಜನಸಾಮಾನ್ಯರ ಅಭಿವೃದ್ಧಿಗೋಸ್ಕರ. ಆದರೆ ಇಲ್ಲಿ ನಡೆಯುತ್ತಿರುವುದೇ ಬೇರೆ. ಮುಡಾ ಸಭೆಯ ಬಹುತೇಕ ಸಬ್ಜೆಕ್ಟ್​ಗಳು ಶಾಸಕರುಗಳಿಗೆ ಸೇರಿದ್ದವು. ಮುಡಾ ಸದಸ್ಯರಾಗಲು ಬೇರೆ ಜಿಲ್ಲೆಯ ಪರಿಷತ್ ಸದಸ್ಯರು ತಮ್ಮ ವಾಸ ಸ್ಥಳವನ್ನು ಮೈಸೂರು ಎಂದು ತೋರಿಸುತ್ತಾರೆ. ಈ ಮಟ್ಟಕ್ಕೆ ಇಲ್ಲಿಯ ಶಾಸಕರು ಲಾಬಿ ಮಾಡುತ್ತಾರೆ. ಈ ಬೋರ್ಡ್ ವ್ಯವಸ್ಥೆ ಬದಲಾಗಬೇಕು ಎಂದು ಹೇಳಿದ್ದಾರೆ.

ನಾನು ಇಲ್ಲಿ ಅಧಿಕಾರದಲ್ಲಿರುವಾಗಲೇ ಭ್ರಷ್ಟಾಚಾರ ನಡೆದಿತ್ತು. ಈ ಬಗ್ಗೆ ಸರಕಾರದ ಗಮನಕ್ಕೆ ತಂದು ಪತ್ರ ಬರೆದು ಆಯುಕ್ತರ ಬದಲಾವಣೆಗೆ ಯತ್ನಿಸಿದ್ದೆ. ಆದರೆ ಸರಕಾರದ ಕೆಲವರು ಜಾತಿ ಕಾರಣಕ್ಕೆ ಅವರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಿದರು. ಆಯುಕ್ತರೂ ಕೋರ್ಟ್​ಗೆ ಹೋಗಿ ಅಧಿಕಾರ ಉಳಿಸಿಕೊಂಡಿದ್ದರು.

ನನ್ನ ಅವಧಿಯಲ್ಲಿ ಒಂದೇ ಒಂದು ಮುಡಾ ನಿವೇಶನ ನೀಡಿದ್ದರೆ. ಅಧಿಕಾರಿಗಳಿಗೆ ಒತ್ತಡ ಹಾಕಿ ಯಾರಿಗಾದರು ನಿವೇಶನ ಕೊಡಿಸಿದ್ದೀನಿ ಎಂದು ತಿಳಿದುಬಂದರೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡ್ತಿನಿ ಎಂದು ಹೇಳಿದ್ದಾರೆ.

More articles

Latest article