ಬಿಜೆಪಿ ಶಾಸಕ ಮುನಿರತ್ನಗೆ ತಪ್ಪದ ಸಂಕಷ್ಟ; ಸುಲಿಗೆ, ವಂಚನೆ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರ

Most read

ಬೆಂಗಳೂರು: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಸುಲಿಗೆ, ವಂಚನೆ ಕೇಸ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಮುನಿರತ್ನ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಬೃಹತ್ ಬೆಂಗಳೂರು ಮಹಾನಗರಪಾಲಿಕೆ (ಬಿಬಿಎಂಪಿ) ತ್ಯಾಜ್ಯ ವಿಲೇವಾರಿ ಗುತ್ತಿಗೆದಾರ ಚಲುವರಾಜು ಅವರು ಮುನಿರತ್ನ ವಿರುದ್ಧದ ದೂರು ದಾಖಲಿಸಿದ್ದರು. ಶಾಸಕ ಮುನಿರತ್ನ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, ಅರ್ಜಿ ವಜಾಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದೆ.

ಗುತ್ತಿಗೆದಾರ ಚಲುವರಾಜು ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರಿಗೆ ದೂರು ನೀಡಿದ್ದರು. ಜತೆಗೆ ತಮಗೆ ರಕ್ಷಣೆ ನೀಡಲೂ ಮನವಿ ಮಾಡಿದ್ದರು. ಜೀವ ಬೆದರಿಕೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಶಾಸಕ ಮುನಿರತ್ನ ಸೇರಿ ಎ-2 ಮುನಿರತ್ನರ ಆಪ್ತ ಸಹಾಯಕ ವಿಜಯ್ ಕುಮಾರ್, ಎ-3 ಸೆಕ್ಯೂರಿಟಿ ಅಭಿಷೇಕ್ ಮತ್ತು ಎ-4 ವಸಂತ್ ಕುಮಾರ್ ಆರೋಪ ಎದುರಿಸುತ್ತಿದ್ದಾರೆ.

ಚಲುವರಾಜುಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿತ್ತು. ಮುನಿರತ್ನ ನನ್ನನ್ನ ಅವಾಚ್ಯವಾಗಿ ನಿಂದಿಸಿ, ಜಾತಿ ನಿಂದನೆ ಜೊತೆಗೆ ಜೀವ ಬೆದರಿಕೆ ಹಾಕಿದ್ದಾರೆಂದು ಅವರು ಆರೋಪ ಮಾಡಿದ್ದರು. ವೈಯ್ಯಾಲಿ ಕಾವಲ್ ಪೊಲೀಸ್ ಸ್ಟೇಷನ್ನಲ್ಲಿ ಚಲುವರಾಜು ದೂರು ನೀಡಿದ್ದರು. ಎರಡು ಎಫ್ಐಆರ್ ದಾಖಲಾಗುತ್ತಿದ್ದಂತೆ ಪೊಲೀಸರು, ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಶಾಸಕ ಮುನಿರತ್ನ ಅವರನ್ನು ಬಂಧಿಸಿದ್ದರು.. ಜಾತಿ ನಿಂದನೆ, ಜೀವ ಬೆದರಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ಮುನಿರತ್ನಗೆ ಜಾಮೀನು ಸಿಕ್ಕಿತ್ತು. ಇನ್ನೇನು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗುವುದರೊಳಗೆ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಮತ್ತೆ ಬಂಧಿಸಿದ್ದರು

More articles

Latest article