ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಲು ಮುಂದಾಗಿದ್ದಾರೆ : ಡಿಸಿಎಂ ಡಿಕೆ ಶಿವಕುಮಾರ್

ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಸಚಿವ ಬಿ. ನಾಗೇಂದ್ರ ಅವರು ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದ ಅವರು, ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ಆಗ್ರಹಿಸುತ್ತಿರುವ ಬಗ್ಗೆ ಕೇಳಿದಾಗ, ನಾನು, ಗೃಹ ಸಚಿವರು ಸಚಿವ ನಾಗೇಂದ್ರ ಅವರ ಜತೆ ಚರ್ಚೆ ಮಾಡಿದ್ದೇವೆ. ಅವರು ಈ ಅಕ್ರಮದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ.

ಆದರೆ ಪಕ್ಷದ ಹಾಗೂ ಸರ್ಕಾರದ ಘನತೆಗೆ ಧಕ್ಕೆ ಬರಬಾರದು ಎಂದು ಸ್ವತಃ ನಾಗೇಂದ್ರ ಅವರೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇಂದು ಅವರು ರಾಜೀನಾಮೆ ನೀಡಬಹುದು ಎಂದರು. ಸರ್ಕಾರ ರಾಜೀನಾಮೆ ಸ್ವೀಕರಿಸಲಿದೆಯೇ ಎಂದು ಕೇಳಿದಾಗ, ಮುಖ್ಯಮಂತ್ರಿಗಳು ಪಕ್ಷದ ಹೈಕಮಾಂಡ್ ಜತೆ ಚರ್ಚೆ ಮಾಡಿ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ ಎಂದರು.

ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಸಚಿವ ಬಿ. ನಾಗೇಂದ್ರ ಅವರು ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದ ಅವರು, ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ಆಗ್ರಹಿಸುತ್ತಿರುವ ಬಗ್ಗೆ ಕೇಳಿದಾಗ, ನಾನು, ಗೃಹ ಸಚಿವರು ಸಚಿವ ನಾಗೇಂದ್ರ ಅವರ ಜತೆ ಚರ್ಚೆ ಮಾಡಿದ್ದೇವೆ. ಅವರು ಈ ಅಕ್ರಮದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ.

ಆದರೆ ಪಕ್ಷದ ಹಾಗೂ ಸರ್ಕಾರದ ಘನತೆಗೆ ಧಕ್ಕೆ ಬರಬಾರದು ಎಂದು ಸ್ವತಃ ನಾಗೇಂದ್ರ ಅವರೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇಂದು ಅವರು ರಾಜೀನಾಮೆ ನೀಡಬಹುದು ಎಂದರು. ಸರ್ಕಾರ ರಾಜೀನಾಮೆ ಸ್ವೀಕರಿಸಲಿದೆಯೇ ಎಂದು ಕೇಳಿದಾಗ, ಮುಖ್ಯಮಂತ್ರಿಗಳು ಪಕ್ಷದ ಹೈಕಮಾಂಡ್ ಜತೆ ಚರ್ಚೆ ಮಾಡಿ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ ಎಂದರು.

More articles

Latest article

Most read