ಗಾಯಕ ಸೋನು ನಿಗಮ್ ವಿರುದ್ದ ಬಲವಂತ ಕ್ರಮ ಬೇಡ, ಹೈ ಕೋರ್ಟ್ ಸೂಚನೆ; ನಿಟ್ಟುಸಿರು ಬಿಟ್ಟ ಗಾಯಕ

Most read

ಬೆಂಗಳೂರು: ಕನ್ನಡವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಗಾಯಕ ಸೋನು ನಿಗಮ್ ವಿರುದ್ದ ಯಾವುದೇ ಬಲವಂತ ಕ್ರಮ ಕೈಗೊಳ್ಳಬಾರದೆಂದು ಎಂದು ಕರ್ನಾಟಕ ಹೈಕೋರ್ಟ್ ಇಂದು ಸೂಚನೆ ನೀಡಿದೆ.

ಸೋನು ನಿಗಮ್ ವಿರುದ್ಧ ನಗರದ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ
ಕರ್ನಾಟಕ ರಕ್ಷಣಾ ವೇದಿಕೆಯ ನಗರ ಅಧ್ಯಕ್ಷ ಧರ್ಮರಾಜ ಅವರು ದೂರು ನೀಡಿದ್ದರು. ನಂತರ ಸೋನು ನಿಗಂ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.
ಗಾಯಕ ಸೋನು ನಿಗಮ್ ತಮ್ಮ ಮೇಲಿನ ಎಫ್ ಐ ಆರ್ ರದ್ದುಗೊಳಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇಂದು ನ್ಯಾ. ಶಿವಶಂಕರ್ ಅಮರಣ್ಣನವರ್ ಅವರಿದ್ದ
ಪೀಠದಲ್ಲಿ ಸೋನು ನಿಗಮ್ ಪ್ರಕರಣದ ವಿಚಾರಣೆ
ನಡೆಯಿತು.
ಸೋನು ನಿಗಮ್ ತನಿಖೆಗೆ ಹಾಜರಾಗಿಲ್ಲವೆಂದು ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಎನ್. ಜಗದೀಶ್ ನ್ಯಾಯಾಲಯದ ಗಮನಕ್ಕೆ ತಂದರು.
ಸೋನು ನಿಗಮ್ ಬೆಂಗಳೂರಿಗೆ ಬಂದು
ವಿಚಾರಣೆಗೆ ಹಾಜರಾದರೆ ಸಮಸ್ಯೆ ಆಗುವ ಸಾಧ್ಯತೆಗಳಿವೆ. ಆದ್ದರಿಂದ ವಿಚಾರಣೆಗೆ ಖುದ್ದು ಹಾಜರಾತಿಗೆ ವಿನಾಯಿತಿ ನೀಡಬೇಕು ಎಂದು ಸೋನು ನಿಗಮ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಎರಡೂ ಕಡೆಯ ವಾದ ಆಲಿಸಿದ ನ್ಯಾ.ಶಿವಶಂಕರ್ ಅಮರಣ್ಣವರ್ ಅವರು, ಸೋನು ನಿಗಂ ಅವರಿರುವ ಸ್ಥಳದಲ್ಲಿಯೇ ಅವರ ವೆಚ್ಚದಲ್ಲಿಯೇ ವಿಚಾರಣೆ ಮಾಡುವಂತೆ ಅಥವಾ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ಮಾಡುವಂತೆ ಪೊಲೀಸರಿಗೆ ಸೂಚಿಸಿದರು.

ಅಲ್ಲದೆ ಸೋನು ನಿಗಂ ಅವರ ವಿರುದ್ಧ ಯಾವುದೇ ಬಲವಂತ ಕ್ರಮ ಕೈಗೊಳ್ಳಬಾರದೆಂದು. ನ್ಯಾಯಾಲಯದ ಅನುಮತಿ ಇಲ್ಲದೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಬಾರದು ಎಂದು ಸಹ ಪ್ರಕರಣದ ತನಿಖಾಧಿಕಾರಿಗಳಿಗೆ ಸೂಚನೆ ನೀಡಿದರು.
ವಾದ ಪ್ರತಿವಾದ ಆಲಿಸಿದ ನಂತರ ನ್ಯಾಯಮೂರ್ತಿಗಳು ಗಾಯಕ ಸೋನು ನಿಗಮ್ ವಿರುದ್ದ ಯಾವುದೇ ಬಲವಂತ ಕ್ರಮ ಕೈಗೊಳ್ಳಬಾರದೆಂದು ಎಂದು ಸೂಚನೆ ನೀಡಿದರು.

More articles

Latest article