ಮೈಸೂರು ದಸರಾ:ಸಾಹಿತಿ ಬಾನು ಮುಷ್ತಾಕ್ ಆಯ್ಕೆ ವಿರುದ್ಧ ದೂರು ಬಂದಿಲ್ಲ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಸ್ಪಷ್ಟನೆ

ಮೈಸೂರು: ಜಗದ್ವಿಖ್ಯಾತಿಯ ಮೈಸೂರು ದಸರಾ ಉದ್ಘಾಟನೆಗೆ ಖ್ಯಾತ ಸಾಹಿತಿ, ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ ಯಾರೊಬ್ಬರೂ ದೂರು ನೀಡಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಉದ್ಘಾಟಕರು ಸೇರಿದಂತೆ ಎಲ್ಲ ಗಣ್ಯರನ್ನು ಸೆಪ್ಟೆಂಬರ್ 10 ರೊಳಗೆ ಜಿಲ್ಲಾಡಳಿತದಿಂದ ಅಧಿಕೃತವಾಗಿ ಆಹ್ವಾನಿಸಲಾಗುತ್ತದೆ ಎಂದು ತಿಳಿಸಿದರು.

ಈ ವರ್ಷ ನಾಡಹಬ್ಬ ದಸರಾ ಉತ್ಸವದ ತಯಾರಿಗಳನ್ನು 2 ತಿಂಗಳು ಮುಂಚಿತವಾಗಿಯೇ ಆರಂಭಿಸಲಾಗಿದೆ. ಸೆ.22ರಿಂದ ಅ.2ರವರೆಗೆ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಕುರಿತು ಸಲಹೆ ನೀಡಲು 19 ಉಪ ಸಮಿತಿಗಳನ್ನು ರಚಿಸಲಾಗಿದೆ ಎಂದರು.

ಆನ್‌ ಲೈನ್‌ ನಲ್ಲಿ ಟಿಕೆಟ್‌ ಮಾರಾಟವನ್ನು ಆದಷ್ಟೂ ಬೇಗ ಆರಂಭಿಸಲಾಗುತ್ತದೆ.ಅರಮನೆ ಆವರಣದಲ್ಲಿ ಸೇರಿದಂತೆ ವಿವಿಧ ವೇದಿಕೆಗಳಲ್ಲಿ ಕಾರ್ಯಕ್ರಮ ನೀಡುವ ಕಲಾತಂಡಗಳು, ಕಲಾವಿದರು, ಯುವ ದಸರಾ, ಯುವ ಸಂಭ್ರಮದಲ್ಲಿ ಪಾಲ್ಗೊಳ್ಳುವವರ ಪಟ್ಟಿಯನ್ನು ಸೆಪ್ಟೆಂಬರ್‌ ಮೊದಲ ವಾರದಲ್ಲಿ ಅಂತಿಮಗೊಳಿಸಿ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದರು.

ಮೈಸೂರು: ಜಗದ್ವಿಖ್ಯಾತಿಯ ಮೈಸೂರು ದಸರಾ ಉದ್ಘಾಟನೆಗೆ ಖ್ಯಾತ ಸಾಹಿತಿ, ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ ಯಾರೊಬ್ಬರೂ ದೂರು ನೀಡಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಉದ್ಘಾಟಕರು ಸೇರಿದಂತೆ ಎಲ್ಲ ಗಣ್ಯರನ್ನು ಸೆಪ್ಟೆಂಬರ್ 10 ರೊಳಗೆ ಜಿಲ್ಲಾಡಳಿತದಿಂದ ಅಧಿಕೃತವಾಗಿ ಆಹ್ವಾನಿಸಲಾಗುತ್ತದೆ ಎಂದು ತಿಳಿಸಿದರು.

ಈ ವರ್ಷ ನಾಡಹಬ್ಬ ದಸರಾ ಉತ್ಸವದ ತಯಾರಿಗಳನ್ನು 2 ತಿಂಗಳು ಮುಂಚಿತವಾಗಿಯೇ ಆರಂಭಿಸಲಾಗಿದೆ. ಸೆ.22ರಿಂದ ಅ.2ರವರೆಗೆ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಕುರಿತು ಸಲಹೆ ನೀಡಲು 19 ಉಪ ಸಮಿತಿಗಳನ್ನು ರಚಿಸಲಾಗಿದೆ ಎಂದರು.

ಆನ್‌ ಲೈನ್‌ ನಲ್ಲಿ ಟಿಕೆಟ್‌ ಮಾರಾಟವನ್ನು ಆದಷ್ಟೂ ಬೇಗ ಆರಂಭಿಸಲಾಗುತ್ತದೆ.ಅರಮನೆ ಆವರಣದಲ್ಲಿ ಸೇರಿದಂತೆ ವಿವಿಧ ವೇದಿಕೆಗಳಲ್ಲಿ ಕಾರ್ಯಕ್ರಮ ನೀಡುವ ಕಲಾತಂಡಗಳು, ಕಲಾವಿದರು, ಯುವ ದಸರಾ, ಯುವ ಸಂಭ್ರಮದಲ್ಲಿ ಪಾಲ್ಗೊಳ್ಳುವವರ ಪಟ್ಟಿಯನ್ನು ಸೆಪ್ಟೆಂಬರ್‌ ಮೊದಲ ವಾರದಲ್ಲಿ ಅಂತಿಮಗೊಳಿಸಿ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದರು.

More articles

Latest article

Most read