ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ ಆಪರೇಷನ್ ಆಗುತ್ತದೆ: ಸಿಎಂ ಏಕನಾಥ್​ ಶಿಂಧೆ

Most read

ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ರಾಜ್ಯ  ಬಿಜೆಪಿ ನಾಯಕರು ಹೇಳಿಕೆ ಪುಷ್ಟಿ ಕಡವಂತಾ ಹೇಳಿಕೆಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ನೀಡಿದ್ದಾರೆ.

ಸತಾರ ನಗರದಲ್ಲಿ ಸಿಎಂ ಏಕನಾಥ್​ ಶಿಂಧೆ ಮಾತನಾಡಿ, ನಾನು ಕರ್ನಾಟಕದ ಒಂದು ಕಾರ್ಯಕ್ರಮಕ್ಕೆ ತೆರಳಿದಾಗ ಅವರು ಹೇಳಿದ್ರು, ಕರ್ನಾಟಕದಲ್ಲಿಯೂ ‘ನಾಥ್​’ ಆಪರೇಷನ್ ಮಾಡೋದಿದೆ ಅಂದ್ರು. ನಾನು ನಾಥ್ ಆಪರೇಷನ್ ಅಂದ್ರೆ ಏನು ಅಂತ ಕೇಳಿದೆ. ನೀವು ಮಹಾರಾಷ್ಟ್ರದ ಮಹಾಘಟಬಂಧನ ಸರ್ಕಾರ ಪತನ ಮಾಡಿದ್ರಿ.. ಹೀಗಾಗಿ ನಿಮ್ಮ ಅನುಭವ ನಮಗೆ ಬಹಳ ಅವಶ್ಯಕವಿದೆ ಎಂದು ಹೇಳಿದರು. ಇದರಿಂದ ಕರ್ನಾಟದಲ್ಲಿ ತುಂಬಾ ದಿನ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ ಎಂದು ಸಿಎಂ ಏಕನಾಥ್​ ಶಿಂಧೆ ಹೇಳಿದರು.

ಲೋಕಸಭಾ ಚುನಾವಣೆ ಬಳಿಕ ಕರ್ನಾಟದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರುವುದರಿಂದ ನನಗೆ ಚುನಾವಣೆ ಮುಗಿದ ಬಳಿಕ ಅಲ್ಲಿನ ನಾಯಕರು ಕರ್ನಾಟಕಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ ಎಂದು ತಿಳಿಸಿದ್ದಾರೆ ಅಂತಾ ಸಭೆಯಲ್ಲಿ ಸಿಎಂ ಏಕನಾಥ್ ಸಿಂಧೆ ಹೇಳಿಕೆ ನೀಡಿದರು.

More articles

Latest article