ನವದೆಹಲಿ: ಆಪರೇಷನ್ ಸಿಂಧೂರ ಹೆಸರಿನಲ್ಲಿ ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಪಂಜಾಬ್ ಪ್ರಾಂತ್ಯದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿರುವುದು ಯುದ್ಧದ ಕೃತ್ಯವೇ ಹೊರತು ಬೇರೇನೂ ಅಲ್ಲ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ. ಭಾರತದ ದಾಳಿಗೆ ಸೂಕ್ತ ಪ್ರತ್ಯುತ್ತರ ನೀಡುವುದಾಗಿಯೂ ಅವರು ತಿಳಿಸಿದ್ದಾರೆ.
ಭಾರತ, ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ನಡೆಸಿರುವ ದಾಳಿಯನ್ನು ಪಾಕ್ ಖಚಿತಪಡಿಸಿದ್ದು, ಪ್ರಧಾನಿ ಷೆಹ್ಬಾಜ್ ಷರೀಫ್ ಅವರು ಎಕ್ಸ್ ನಲ್ಲಿ ಪಾಕಿಸ್ತಾನದ ಐದು ಸ್ಥಳಗಳ ಮೇಲೆ ದಾಳಿ ಮಾಡಿದೆ ಎಂದಿದ್ದಾರೆ.
ಕುತಂತ್ರಿ ವೈರಿಯು ಪಾಕಿಸ್ತಾನದ ಐದು ಸ್ಥಳಗಳ ಮೇಲೆ ಹೇಡಿತನದ ದಾಳಿ ನಡೆಸಿದೆ. ಭಾರತ ಹೇರಿರುವ ಈ ಯುದ್ಧ ಕ್ರಮದ ವಿರುದ್ಧ ಶಕ್ತಿಯುವಾದ ಪ್ರತಿಕ್ರಿಯೆ ನೀಡುವ ಎಲ್ಲ ಹಕ್ಕುಗಳೂ ಪಾಕಿಸ್ತಾನಕ್ಕೆ ಇವೆ. ಮತ್ತು ಅತ್ಯಂತ ಪ್ರಬಲ ಪ್ರತಿಕ್ರಿಯೆಯನ್ನು ನೀಡಲಾಗುತ್ತಿದೆ. ಇಡೀ ದೇಶವು ಪಾಕಿಸ್ತಾನ ಸಶಸ್ತ್ರ ಪಡೆಗಳಿಗೆ ಬೆಂಬಲವಾಗಿ ನಿಂತಿದೆ. ಶತ್ರುವನ್ನು ಹೇಗೆ ಎದುರಿಸಬೇಕು ಎಂಬುದು ಪಾಕಿಸ್ತಾನಕ್ಕೆ ಮತ್ತು ಪಾಕಿಸ್ತಾನದ ಸಶಸ್ತ್ರ ಪಡೆಗಳಿಗೆ ಚೆನ್ನಾಗಿ ಗೊತ್ತಿದೆ.
ʼಶತ್ರುವಿನ ದುಷ್ಟ ಗುರಿಗಳು ಯಶಸ್ವಿಯಾಗುವುದಕ್ಕೆ ನಾವು ಯಾವತ್ತೂ ಬಿಡುವುದಿಲ್ಲʼ ಎಂದು ಅವರು ಪೋಸ್ಟ್ ಹಾಕಿದ್ದಾರೆ.
ಭಾರತದ ಕ್ಷಿಪಣಿಗಳು ಪಾಕ್ ಆಕ್ರಮಿತ ಕಾಶ್ಮೀರದ ಕೋಟ್ಲಿ ಮತ್ತು ಮುಜಾಫರಬಾದ್ , ಪಂಜಾಬ್ ನ ಬಹ್ವಾಲ್ ಪುರ್ ಮೇಲೆ ದಾಳಿ ನಡೆಸಿವೆ ಎಂದು ಸೇನಾ ವಕ್ತಾರ ಲೆ. ಜ. ಅಹಮದ್ ಷರೀಫ್ ಹೇಳಿದ್ದಾರೆ. ನಾವೂ ಸನ್ನದ್ದರಾಗಿದ್ದೇವೆ. ಭಾರತ ಹೇಡಿತನದ ಮತ್ತು ನಾಚಿಕೆಗೇಡಿನ ಕೃತ್ಯ ನಡೆಸಿದೆ. ನಮ್ಮ ಪಾಕಿಸ್ತಾನದ ಬಾಹ್ಯಕಾಶದ ಮೇಲೆ ಭಾರದ ಕ್ಷಿಪಣಿಗಳು ಹಾರಲು ಬಿಡುವುದಿಲ್ಲ ಎಂದು ಗುಡುಗಿದ್ದಾರೆ.
ಈ ದಾಳಿಗೆ ಉತ್ತರ ನೀಡದೆ ಬಿಡುವುದಿಲ್ಲ. ಸೂಕ್ತ ಸಮಯ ಮತ್ತು ಸೂಕ್ತ ಸ್ಥಳದಲ್ಲಿ ಉತ್ತರ ನIಡಿಯೇ ಸಿದ್ಧ. ಬಾರತ ತಾತ್ಕಾಲಿಕ ಸಂತೋಷ ಅನುಭವಿಸುತ್ತಿದೆ. ಈ ಸಂತೋಷ ದುಃಖಕ್ಕೆ ಕಾರಣವಾಗಲೂಬಹುದು ಎಂದು ಪ್ರತಿ ದಾಳಿ ನಡೆಸುವ ಮುನ್ಸೂಚನೆ ನೀಡಿದ್ದಾರೆ. ಈ ದಾಳಿಯ ಬೆನ್ನಲ್ಲೇ ಗಡಿಯಲ್ಲಿ ಪಾಕಿಸ್ತಾನವು ಭಾರತದತ್ತ ಗುಂಡು ಹಾರಿಸಲು ಆರಂಭಿಸಿದೆ ಎಂದು ತಿಳಿದು ಬಂದಿದ್ದು, ಗಡಿಯಲ್ಲಿ ಎರಡೂ ಸೇನೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ವರದಿಯಾಗಿದೆ.
ಭಾರತ ಬುಧವಾರ ಮುಂಜಾನೆ ನಡೆಸಿದ ಆಪರೇಷನ್ ಸಿಂಧೂರ್ನಲ್ಲಿ ಒಂದು ಮಗು ಸೇರಿದಂತೆ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 38 ಜನರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನದ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಹೇಳಿದ್ದಾರೆ.
ಇದನ್ನೂ ಓದಿ:
ಇದನ್ನೂ ಓದಿ: