ಕೈಕೊಟ್ಟ ಪ್ಯಾರಾಚೂಟ್;‌ ಶಿವಮೊಗ್ಗ ಜಿಲ್ಲೆಯ ವಾಯುಪಡೆ ಅಧಿಕಾರಿ ಸಾವು

ಶಿವಮೊಗ್ಗ: ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ತರಬೇತಿ ಸಂದರ್ಭದಲ್ಲಿ ವಿಮಾನದಿಂದ ಕೆಳಗೆ ಹಾರಿದಾಗ ಪ್ಯಾರಾಚೂಟ್‌ ತೆರೆದುಕೊಳ್ಳದೇ ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ ವಾಯುಪಡೆಯ ವಾರೆಂಟ್‌ ಅಧಿಕಾರಿ ಜಿ.ಎಸ್. ಮಂಜುನಾಥ್‌ (36) ಮೃತಪಟ್ಟಿದ್ದಾರೆ. ಆಗ್ರಾದಲ್ಲಿ ಭಾರತೀಯ ವಾಯು ಸೇನೆಗೆ ಸೇರಿದ ಮಾಲ್ಪುರ ಪ್ಯಾರಾಚೂಟ್‌ ಡ್ರಾಪ್‌ ಜೋನ್‌ನಲ್ಲಿ ತರಬೇತಿ ನಡೆಯುತ್ತಿತ್ತು. ವಾಯುಸೇನೆಯ 12 ಅಧಿಕಾರಿಗಳು ಪ್ಯಾರಾಚೂಟ್‌ ತರಬೇತಿಗೆ ವಿಮಾನದಿಂದ ಜಿಗಿದಿದ್ದರು. 11 ಮಂದಿ ಮಾತ್ರ ಪ್ಯಾರಾಚೂಟ್‌ ಬಳಸಿ ಸುರಕ್ಷಿತವಾಗಿ ಲ್ಯಾಂಡ್‌ ಆಗಿದ್ದರು. ಆದರೆ ವಾರಂಟ್‌ ಆಫೀಸರ್‌ ಜಿ.ಎಸ್. ಮಂಜುನಾಥ್‌ ನಾಪತ್ತೆಯಾಗಿದ್ದರು. ಶೋಧ ನಡೆಸಿದಾಗ ಸಮೀಪದ ಜಮೀನಿನಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಮಂಜುನಾಥ್ ಪತ್ತೆಯಾಗಿದ್ದರು. ಕೂಡಲೆ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಜುನಾಥ್ ಅವರಿಗೆ ತಂದೆ ಸುರೇಶ್‌, ತಾಯಿ ನಾಗರತ್ನ, ಇಬ್ಬರು ಸಹೋದರಿಯರು, ಒಬ್ಬ ಸಹೋದರ ಇದ್ದಾರೆ.

ಮಂಜುನಾಥ್‌ ಸಾಗರದಲ್ಲಿ ಪಿಯುಸಿ ಪೂರ್ಣಗೊಳಿಸಿದ್ದರು. ಬಳಿಕ ಭಾರತೀಯ ವಾಯು ಸೇನೆಗೆ ಸೇರಿದ್ದರು. ವೈ ಗ್ರೇಡ್‌ ಅಧಿಕಾರಿಯಾಗಿದ್ದ ವಾರಂಟ್‌ ಅಫೀಸರ್‌ ಮಂಜುನಾಥ್‌, ಅಸ್ಸಾಂನಲ್ಲಿ ತಾಂತ್ರಿಕ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಸ್ಸಾಂ ಮೂಲದ ಯುವತಿಯನ್ನು ಮದುವೆಯಾಗಿದ್ದರು. ಮಂಜುನಾಥ್‌ ಅವರ ಕುಟುಂಬಕ್ಕೆ ಈಗಾಗಲೇ ಮಾಹಿತಿ ನೀಡಲಾಗಿದೆ. ಶನಿವಾರ ತಡರಾತ್ರಿ ಅವರ ಪಾರ್ಥೀವ ಶರೀರ ಹೊಸನಗರಕ್ಕೆ ತರಲಾಗುತ್ತದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಶಿವಮೊಗ್ಗ: ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ತರಬೇತಿ ಸಂದರ್ಭದಲ್ಲಿ ವಿಮಾನದಿಂದ ಕೆಳಗೆ ಹಾರಿದಾಗ ಪ್ಯಾರಾಚೂಟ್‌ ತೆರೆದುಕೊಳ್ಳದೇ ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ ವಾಯುಪಡೆಯ ವಾರೆಂಟ್‌ ಅಧಿಕಾರಿ ಜಿ.ಎಸ್. ಮಂಜುನಾಥ್‌ (36) ಮೃತಪಟ್ಟಿದ್ದಾರೆ. ಆಗ್ರಾದಲ್ಲಿ ಭಾರತೀಯ ವಾಯು ಸೇನೆಗೆ ಸೇರಿದ ಮಾಲ್ಪುರ ಪ್ಯಾರಾಚೂಟ್‌ ಡ್ರಾಪ್‌ ಜೋನ್‌ನಲ್ಲಿ ತರಬೇತಿ ನಡೆಯುತ್ತಿತ್ತು. ವಾಯುಸೇನೆಯ 12 ಅಧಿಕಾರಿಗಳು ಪ್ಯಾರಾಚೂಟ್‌ ತರಬೇತಿಗೆ ವಿಮಾನದಿಂದ ಜಿಗಿದಿದ್ದರು. 11 ಮಂದಿ ಮಾತ್ರ ಪ್ಯಾರಾಚೂಟ್‌ ಬಳಸಿ ಸುರಕ್ಷಿತವಾಗಿ ಲ್ಯಾಂಡ್‌ ಆಗಿದ್ದರು. ಆದರೆ ವಾರಂಟ್‌ ಆಫೀಸರ್‌ ಜಿ.ಎಸ್. ಮಂಜುನಾಥ್‌ ನಾಪತ್ತೆಯಾಗಿದ್ದರು. ಶೋಧ ನಡೆಸಿದಾಗ ಸಮೀಪದ ಜಮೀನಿನಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಮಂಜುನಾಥ್ ಪತ್ತೆಯಾಗಿದ್ದರು. ಕೂಡಲೆ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಜುನಾಥ್ ಅವರಿಗೆ ತಂದೆ ಸುರೇಶ್‌, ತಾಯಿ ನಾಗರತ್ನ, ಇಬ್ಬರು ಸಹೋದರಿಯರು, ಒಬ್ಬ ಸಹೋದರ ಇದ್ದಾರೆ.

ಮಂಜುನಾಥ್‌ ಸಾಗರದಲ್ಲಿ ಪಿಯುಸಿ ಪೂರ್ಣಗೊಳಿಸಿದ್ದರು. ಬಳಿಕ ಭಾರತೀಯ ವಾಯು ಸೇನೆಗೆ ಸೇರಿದ್ದರು. ವೈ ಗ್ರೇಡ್‌ ಅಧಿಕಾರಿಯಾಗಿದ್ದ ವಾರಂಟ್‌ ಅಫೀಸರ್‌ ಮಂಜುನಾಥ್‌, ಅಸ್ಸಾಂನಲ್ಲಿ ತಾಂತ್ರಿಕ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಸ್ಸಾಂ ಮೂಲದ ಯುವತಿಯನ್ನು ಮದುವೆಯಾಗಿದ್ದರು. ಮಂಜುನಾಥ್‌ ಅವರ ಕುಟುಂಬಕ್ಕೆ ಈಗಾಗಲೇ ಮಾಹಿತಿ ನೀಡಲಾಗಿದೆ. ಶನಿವಾರ ತಡರಾತ್ರಿ ಅವರ ಪಾರ್ಥೀವ ಶರೀರ ಹೊಸನಗರಕ್ಕೆ ತರಲಾಗುತ್ತದೆ ಎಂದು ಜಿಲ್ಲಾಡಳಿತ ತಿಳಿಸಿದೆ.

More articles

Latest article

Most read