ಬೆಂಗಳೂರು : ದುರಸ್ತಿ ಕಾಮಗಾರಿಗಳ ಟೆಸ್ಟಿಂಗ್ ಸಲುವಾಗಿ ನಾಲ್ಕು ದಿನ ರಾಷ್ಟ್ರೀಯ ಹೆದ್ದಾರಿ-4 ರ ಪೀಣ್ಯ ಎಲಿವೇಟೆಡ್ ಪ್ರೈಓವರ್ (ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಮೇಲ್ವೇತುವೆ) ಬಂದ್ ಮಾಡಲಾಗುತ್ತಿದೆ. ಮೇ 5 ರ ಬೆಳಗ್ಗೆ 5 ಗಂಟೆಯಿಂದ ಮೇ8 ರ ಬೆಳಗ್ಗೆ 11 ಗಂಟೆವರೆಗೆ ಬಂದ್ ಆಗಿರಲಿದೆ. ಎಲ್ಲಾ ವಾಹನಗಳನ್ನು ಪೀಣ್ಯ ಫ್ಲೈಓವರ್ ಮೇಲೆ ಸಂಚಾರ ನಿರ್ಬಂಧಿಸಲಾಗುತ್ತಿದೆ.
ಪೀಣ್ಯ ಫ್ಲೈಓವರ್ ಮೇಲೆ ಅಳವಡಿಸಲಾದ ಕೇಬಲ್ಗಳ ದುರಸ್ತಿ ಕಾಮಗಾರಿ ಪೂರ್ಣಗೊಂಡಿದೆ. ಕಾಮಗಾರಿಗಳ ದುರಸ್ತಿಗಳ ಪರಿಶೀಲನೆ ನಡೆಯಲಿದೆ. ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪರೀಕ್ಷೆ ನಡೆಸಲಿದೆ. ರಾಷ್ಟ್ರೀಯ ಹೆದ್ದಾರಿ-4 ರ ಪೀಣ್ಯ ಎಲಿವೇಟೆಡ್ ಫೈಓವರ್ ಮೇಲೆ ಕೆನ್ನಮೆಟಲ್ ವಿಡಿಯಾ ಅಪ್ಪರ್ ರ್ಯಾಂಪ್ ಎಸ್.ಆರ್.ಎಸ್ ಡೌನ್ ರ್ಯಾಂಪ್ ವರೆಗೆ ಎರಡು ಕಡೆಯಲ್ಲಿ ಫೈಓವರ್ ಮೇಲೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.
ಬದಲಿ ಮಾರ್ಗ ವ್ಯವಸ್ಥೆ
ನೆಲಮಂಗಲ ಬೆಂಗಳೂರು ಕಡೆಗೆ: ಕೆನ್ನಮೆಟಲ್ ಫ್ಯಾಕ್ಟರಿಹತ್ತಿರ ಫೈಓವರ್ನ ಫೈಓವರ್ ಕೆಳಭಾಗದ ಎನ್.ಹೆಚ್.4 ಮತ್ತು ಸರ್ವಿಸ್ ರಸ್ತೆ ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್ ಮೂಲಕ 8ನೇ ಮೈಲಿ ಎಸ್.ಆರ್.ಎಸ್ ಜಂಕ್ಷನ್ ದಾಸರಹಳ್ಳಿ ಗೊರಗುಂಟೆಪಾಳ್ಯ
ಸಿಎಂಟಿಐ ನಿಂದ ನೆಲಮಂಗಲ ಕಡೆಗೆ : ಫೈಓವರ್ ಕೆಳಭಾಗದ ಎನ್.ಹೆಚ್.-4 ಮತ್ತು ಸರ್ವಿಸ್ ರಸ್ತೆ ಮೂಲಕ -ಎಸ್.ಆರ್.ಎಸ್ ಜಂಕ್ಷನ್ ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್ ಜಾಲಹಳ್ಳಿ ಕ್ರಾಸ್ ದಾಸರಹಳ್ಳಿ 8ನೇ ಮೈಲಿ ಪಾರ್ಲೆಜಿ ಟೋಲ್
ಪೀಣ್ಯ ಮೇಲೇತುವೆ ಮೂಲಕ ಸಾಗುವ ವಾಹನಗಳ ರಸ್ತೆ ಸುರಕ್ಷತೆ ಮತ್ತು ಸುಗಮ ಸಂಚಾರದ ಹಿತದೃಷ್ಟಿಯಿಂದ ಮೇಲ್ಕಂಡ ಮಾರ್ಪಾಡುಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸುವಂತೆ ವಿನಂತಿಸಲಾಗಿದೆ.

