ದೆಹಲಿ: ಜಂತರ್ ಮಂತರ್ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ನಿಂದ ದಾಳಿ ನಡೆಸಿದ ಪೋಲಿಸರ ವಿರುದ್ಧ FIR ದಾಖಲಿಸುವಂತೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ, ಪೆಲೆಟ್ ದಾಳಿಯಿಂದ ಗಾಯಗೊಂಡಿರುವ ಸಾಹಿಲ್ ಲೋಚಬ್ ಜೊತೆ ಪಾರ್ಲಿಮೆಂಟ್ ಸ್ಟ್ರೀಟ್ನಲ್ಲಿರುವ ಡಿಸಿಪಿ ಕಚೇರಿಗೆ ತೆರಳಿದ ರಾಹುಲ್ ಗಾಂಧಿ ಈ ಕುರಿತು ಡಿಸಿಪಿ ಗೆ ಮನವಿ ಸಲ್ಲಿಸಿದರು
ಜುಲೈ 20 ರಂದು, ಜಂತರ್ ಮಂತರ್ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಸಾಹಿಲ್ ಮೇಲೆ ಪೊಲೀಸರು ಪೆಲೆಟ್ ಗನ್ನಿಂದ ಹಲ್ಲೆ ನಡೆಸಿದರು. ಪೆಲೆಟ್ ದಾಳಿಯಿಂದ ತೀವ್ರವಾಗಿ ಗಾಯಗೊಂಡ ಸಾಹಿಲ್ ಈಗ ಒಂದು ಕಣ್ಣಿನ ದೃಷ್ಟಿ ಕಳೆದುಕೊಳ್ಳುವ ಅಪಾಯದಲ್ಲಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

