ಪ್ರಭುದ್ಯಾ ಕೊಲೆ ಪ್ರಕರಣ : ಕೇವಲ ಎರಡು ಸಾವಿರಕ್ಕೆ ಕೊಂದನಾ‌ ನೀಚ?

Most read

ಇತ್ತೀಚೆಗೆ ಅನುಮಾನಾಸ್ಪದವಾಗಿ ಮೃತಪಟ್ಟ ವಿದ್ಯಾರ್ಥಿನಿ ಪ್ರಭುದ್ಯಾ ಸಾವಿನ ಸಂಬಂಧ ಸುಬ್ರಮಣ್ಯಪುರ ಠಾಣೆ ಪೊಲೀಸರು ಅಪ್ರಾಪ್ತನನ್ನು ಬಂಧಿಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ಬಾಲಕ ಪ್ರಭುದ್ಯಾರನ್ನು ಕೊಲೆ ಮಾಡಿರುವುದು ಈಗ ಬೆಳಕಿಗೆ ಬಂದಿದೆ.

ಸುಬ್ರಮಣ್ಯ ಪುರದ ಬೃಂದಾವನ ಲೇಔಟ್‌ ನಿವಾಸಿ ಪ್ರಭುದ್ಯಾ (20)ಳ ಮೃತದೇಹ ಮೇ 15ರ ಸಂಜೆ ಮನೆಯ ಸ್ನಾನದಗೃಹದಲ್ಲಿ ಕತ್ತು ಮತ್ತು ಕೈ ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆರಂಭದಲ್ಲಿ ಪೊಲೀಸರು, ಅನುಮಾನಸ್ಪದ ಸಾವು ಎಂದು ಪ್ರಕರಣ ದಾಖಲಿಸಿದ್ದರು. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಕೊಲೆಯ ಶಂಕೆ ಇರುವುದರಿಂದ ಕೊಲೆ ಪ್ರಕರಣ ದಾಖಲಿಸಿಕೊಂಡು ವಿಚಾರಣೆಯನ್ನು ಚುರುಕುಗೊಂಡಿತ್ತು.

ಬಾಲಕನನ್ನು ಬಂಧಿಸಿ ವಿಚಾರಣೆ ನಡೆಸಿದ ಪೊಲೀಸರಿಗೆ ಆತಂಕಕಾರಿ ವಿಷಯ ಬಯಲಾಗಿದೆ. 15 ವರ್ಷದ ಬಾಲಕ ಮನೆಯಲ್ಲಿ 2 ಸಾವಿರ ರೂಪಾಯಿಗಳನ್ನು ಕಳ್ಳತನ ಮಾಡಿದ್ದನು. ಇದನ್ನು ನೋಡಿದ್ದ ಪ್ರಭುದ್ಯಾ, ನಿನ್ನ ಪೋಷಕರಿಗೆ ಹೇಳೋದಾಗಿ ಬಾಲಕನಿಗೆ ಹೆದರಿಸಿದ್ದಳು. ಎಲ್ಲಿ ಅಪ್ಪ-ಅಮ್ಮನಿಗೆ ಹೇಳುತ್ತಾಳೋ ಎನ್ನುವ ಭಯದಲ್ಲಿ ಬಾಲಕ ಹತ್ಯೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಹಣ ಕದ್ದಿದ್ದನ್ನು ತಂದೆ, ತಾಯಿಗೆ ಹೇಳುತ್ತಾಳೆ ಎಂದು ಭಯಗೊಂಡ ಅಪ್ರಾಪ್ತನು ಹರಿತವಾದ ಚಾಕುವಿನಿಂದ ಯುವತಿಯ ಕೈ ಹಾಗೂ ಕುತ್ತಿಗೆ ಕುಯ್ದು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಕೊಲೆ ಮಾಡಿದ ಬಳಿಕ ಬಾಲಕ ಡೆತ್​ನೋಟ್​ ಅನ್ನು ಬರೆದಿಟ್ಟು ತಾನೇ ಆತ್ಮಹತ್ಯೆ ಮಾಡಿಕೊಂಡಂತೆ ರೂಪಿಸಿದ್ದನು. ಸದ್ಯ ಈ ಸಂಬಂಧ ಪೊಲೀಸರು ಅಪ್ರಾಪ್ತ ಬಾಲಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

More articles

Latest article