ಸವಾಲು ಸ್ವೀಕರಿಸಿಲ್ಲ ಹಾಗಾಗಿ ನಾನು ರಾಜೀನಾಮೆ ನೀಡಲ್ಲ: ಶಾಸಕ ಪ್ರದೀಪ್‌ ಈಶ್ವರ್‌

Most read

ನನ್ನ ಸವಾಲನ್ನು ಸ್ವೀಕರಸಿಲ್ಲ ನಾನು ಯಾಕೆ ರಾಜೀನಾಮೆ ಕೊಡ್ಬೇಕು. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಕಾಂಗ್ರೆಸ್‌ ಶಾಸಕ (Congress) ಪ್ರದೀಪ್‌ ಈಶ್ವರ್‌ (Pradeep Eshwar) ಹೇಳಿದ್ದಾರೆ.

ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡಬೇಕೆಂಬ ಬಿಜೆಪಿ (BJP) ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜೀನಾಮೆಗೆ ಆಗ್ರಹ ಮಾಡಿದ ವಿರೋಧ ಪಕ್ಷದವರಿಗೆ ಧನ್ಯವಾದ. ಸುಧಾಕರ್‌ (Sudhakar) ಅವರು ನನ್ನ ಸವಾಲು ಸ್ವೀಕಾರ ಮಾಡಿರಲಿಲ್ಲ. ನನ್ನ ಸವಾಲು ಸ್ವೀಕರಿಸುತ್ತಿದ್ದರೆ ನಾನು ರಾಜೀನಾಮೆ ನೀಡುತ್ತಿದ್ದೆ ಎಂದು ಹೇಳಿದರು.

ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಚಿಕ್ಕಬಳ್ಳಾಪುರ (Chikkaballapura) ಲೋಕಸಭಾ ಕ್ಷೇತ್ರದಲ್ಲಿ ಹಣದ ಹೊಳೆ ಹರಿದಿದೆ. ಬಿಜೆಪಿಯವರು ನಾನು ರಾಜೀನಾಮೆ ಕೊಡಬಹುದು ಅಂತ ಕಾಯ್ತಿದ್ದಾರೆ. ನಾನು ರಾಜೀನಾಮೆ ಕೊಟ್ರೆ ನೆಮ್ಮದಿಯಾಗಿ ಇರಬಹುದು ಅಂದುಕೊಂಡಿದ್ದಾರೆ. ಆದರೆ ಅವರಿಗೆ ನಾನು ಆ ನೆಮ್ಮದಿ ಕೊಡಲ್ಲ ಎಂದು ಪ್ರದೀಪ್ ಈಶ್ವರ್ ತಿಳಿಸಿದರು.

ಲೋಕಸಭಾ ಚುನಾವಣೆ ಪ್ರಚಾರದಲ್ಲಿ, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಡಾ. ಕೆ ಸುಧಾಕರ್ ಒಂದು ಮತ ಹೆಚ್ಚಿಗೆ ಲೀಡ್ ಪಡೆದರೆ ನಾನು ರಾಜೀನಾಮೆ (Resign) ನೀಡುತ್ತೇನೆ. ದೇವರ ಮುಂದೆ ಬಂದು ಸವಾಲು ಸ್ವೀಕರಿಸಲಿ ಎಂದು ಪ್ರದೀಪ್ ಈಶ್ವರ್ ಹೇಳಿಕೆ ಕೊಟ್ಟಿದ್ದರು.

ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ಕೆ ಸುಧಾಕರ್ 20,941 ಮತಗಳ ಮುನ್ನಡೆ ಸಿಕ್ಕಿತ್ತು. ಸುಧಾಕರ್‌ ಜಯಗಳಿಸಿದ ಬೆನ್ನಲ್ಲೇ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡಬೇಕೆಂಬ ಆಗ್ರಹ ಕೇಳಿ ಬಂದಿತ್ತು

More articles

Latest article