ಚಕ್ರವರ್ತಿ ಬೆತ್ತಲಾಗಿದ್ದಾನೆ, ಆತನ ಅಹಂಕಾರ ಮುರಿದಿದ್ದಕ್ಕೆ ಧನ್ಯವಾದ – ಪ್ರಕಾಶ್​ ರಾಜ್​

Most read

ಪ್ರಧಾನಿ ನರೇಂದ್ರ ಮೋದಿಯವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ‘ಅಬ್ಕಿ ಬಾರ್​ 400 ಪಾರ್​’ ಎಂಬ ಘೋಷಣೆ ಕೂಗಿದ್ದರು. ಆದರೆ ನಿನ್ನೆ ಹೊರಬಿದ್ದ ಫಲಿತಾಂಶ ಗಮನಿಸಿ ನಟ ಪ್ರಕಾಶ್ ರಾಜ್​ರವರು​ ಮೋದಿ ಮಾತನ್ನು ನೆನೆದುಕೊಂಡು ಅಪಹಾಸ್ಯ ಮಾಡಿದ್ದಾರೆ. ಬಿಜೆಪಿ ಬಹುಮತ ಪಡೆಯಲು ವಿಫಲವಾಗಿದೆ ಎಂದು ಹೇಳಿದ್ದಾರೆ.

ಟ್ವೀಟ್​ ಮಾಡಿರುವ ನಟ ಪ್ರಕಾಶ್​​ ರಾಜ್​, ವಿಡಿಯೋವೊಂದನ್ನು  ಹಂಚಿಕೊಂಡಿದ್ದಾರೆ. ಅದರಲ್ಲಿ ಯುವತಿಯೊಬ್ಬಳ ‘ಅಬ್ಕಿ ಬಾರ್​ 400 ಪಾರ್​’ ಘೋಷಣೆಯನ್ನು ಹಂಚಿಕೊಂಡು ಪ್ರಧಾನಿಯ ಕಾಲೆಳೆದಿದ್ದಾರೆ.

ಪ್ರಕಾಶ್​ ರಾಜ್​ ಸಾಮಾಜಿಕ ಜಾಲತಾಣದಲ್ಲಿ, ‘ಚಕ್ರವರ್ತಿ ನಗ್ನನಾಗಿದ್ದಾನೆ. ಈಗ ಬೇರೊಬ್ಬರ ಬೆಂಬಲದಲ್ಲಿ ನಡೆಯಲು ಒತ್ತಾಯಿಸುತ್ತಿದ್ದಾನೆ. ಅವರ ಅಂಹಕಾರವನ್ನು ಪಂಕ್ಚರ್​ ಮಾಡಿದ್ದಕ್ಕಾಗಿ ಮತ್ತು ಅವರ ಸ್ಥಾನವನ್ನು ತೋರಿಸಿದ್ದಕ್ಕಾಗಿ ಭಾರತ ಮತ್ತು ಜವಾಬ್ದಾರಿಯುತ ನಾಗರಿಕ ಸಮಾಜಕ್ಕೆ ಧನ್ಯವಾದಗಳು. ನಾವು ನಮ್ಮ ಪರವಾಗಿ ಚೆನ್ನಾಗಿ ಹೋರಾಡಿದ್ದೇವೆ. ನಾವು ಮುಂದುವರೆಯುತ್ತೇವೆ’ ಎಂದು ಬರೆದುಕೊಂಡಿದ್ದಾರೆ.

ಅಂದಹಾಗೆಯೇ ವಾರಣಾಸಿಯಲ್ಲಿ ಸ್ಪರ್ಧಿಸಿದ್ದ ಪ್ರಧಾನಿ ನರೇಂದ್ರ ಮೋದಿ 152513 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಮೋದಿಗೆ ಒಟ್ಟು 612970 ಮತಗಳು ಬಿದ್ದಿದೆ.

More articles

Latest article