Wednesday, October 23, 2024

ಪ್ರಿಯಾಂಕ ಗಾಂಧಿ ಗೆಲುವು ನಿಶ್ಚಿತ: ಸಿದ್ದರಾಮಯ್ಯ

Most read

ವಯನಾಡ್ : ಪ್ರಿಯಾಂಕ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು. ಇಲ್ಲಿನ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿ ನಮ್ಮ ವಿರೋಧಿ. ಬಿಜೆಪಿ ಸೋಲಿಸಲು ಎಲ್ಲಾ ಜಾತ್ಯತೀತ ಶಕ್ತಿ ಮತ್ತು ಮೌಲ್ಯಗಳೊಂದಿಗೆ ನಾವು ಜೊತೆ ಸೇರುತ್ತೇವೆ. ಬಿಜೆಪಿ ಸೋಲಿಸಿ ದೇಶ ಉಳಿಸುವುದು ನಮ್ಮ ಮೊದಲ ಗುರಿ ಎಂದರು.

ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ಕ್ಷೇತ್ರದಲ್ಲಿ ಪ್ರಿಯಾಂಕ ಗಾಂಧಿ ಅವರ ಸ್ಫರ್ಧೆಯ ಪರಿಣಾಮ ಏನಾಗಿರಬಹುದು ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಪ್ರಿಯಾಂಕ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದರು.

More articles

Latest article