ಪುತ್ತೂರಿನಲ್ಲಿ ಪ್ರೀತಿ ವಿಷಯಕ್ಕೆ ಮುಸ್ಲಿಂ ವಿದ್ಯಾರ್ಥಿನಿಗೆ ಹಿಂದೂ ಬಾಲಕನಿಂದ ಚೂರಿ ಇರಿತ

Most read

ಪ್ರೀತಿ ನಿರಾಕರಿಸಿದ ಮುಸ್ಲಿಂ ವಿದ್ಯಾರ್ಥಿನಿಗೆ ಸಹಪಾಠಿ ಹಿಂದೂ ವಿದ್ಯಾರ್ಥಿ ಚಾಕುವಿನಿಂದ ಇರಿದಿರುವ ಘಟನೆ ತ್ತೂರು ತಾಲೂಕಿನ ಕೊಂಬೆಟ್ಟು ಸರ್ಕಾರಿ ಕಾಲೇಜಿನಲ್ಲಿ ನಡೆದಿದೆ.

ಹಿಂದೂ ವಿದ್ಯಾರ್ಥಿಯೋರ್ವ ಮುಸ್ಲಿಂ ವಿದ್ಯಾರ್ಥಿನಿಯ ಕೈಗೆ ಚಾಕುವಿನಿಂದ ಇರಿದಿದ್ದಾನೆ. ವಿದ್ಯಾರ್ಥಿನಿಯ ಕೈಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಇನ್ನು ಚಾಕುವಿನಿಂದ ಇರಿದಿದ್ದ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನು ಇಬ್ಬರು ಅನ್ಯಕೋಮಿನ ವಿದ್ಯಾರ್ಥಿಗಳು ಆಗಿರುವುದರಿಂದ ಚೂರಿ ಇರಿದ ವಿದ್ಯಾರ್ಥಿಯ ಹೆಸರು ಬದಲಿಸಿ ಹೇಳುವಂತೆ ಶಿಕ್ಷಕಿ ಒತ್ತಡ ಹೇರಿದ್ದಾರೆ ಎಂದು ಅಪ್ರಾಪ್ತ ಬಾಲಕಿ ಆರೋಪ ಮಾಡಿದ್ದಾಳೆ.

ಪುತ್ತೂರು ಟೌನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

More articles

Latest article