ತರಕಾರಿ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ಕುರಿತು ರಾಹುಲ್ ಗಾಂಧಿ ಚರ್ಚೆ

ನವದೆಹಲಿ: ‘ಬೆಲೆ ಏರಿಕೆಯಿಂದ ದಿನನಿತ್ಯದ ಅಗತ್ಯ ವಸ್ತುಗಳ ವಿಷಯದಲ್ಲಿ ರಾಜಿ ಮಾಡಿಕೊಳ್ಳುವ ಅನಿರ್ವಾಯತೆ ದೇಶದ ಜನತೆಗೆ ಎದುರಾಗಿದ್ದು, ಸರ್ಕಾರ ಮಾತ್ರ ಕುಂಭಕರ್ಣನಂತೆ ನಿದ್ದೆ ಮಾಡುತ್ತಿದೆ ಎಂದು ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ದೆಹಲಿಯ ಗಿರಿ ನಗರದಲ್ಲಿರುವ ತರಕಾರಿ ಮಾರುಕಟ್ಟೆಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಅವರು ಆಹಾರ ಪದಾರ್ಥಗಳ ಬೆಲೆ ಏರಿಕೆ ಕುರಿತು ಗೃಹಿಣಿಯರ ಜೊತೆ ಸಂವಾದ ನಡೆಸಿದ್ದಾರೆ. ಈ ಕುರಿತ ವಿಡಿಯೊವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಇಲ್ಲಿನ ಸ್ಥಳೀಯ ಮಾರುಕಟ್ಟೆಗೆ ತೆರಳಿ ಜನರೊಂದಿಗೆ ಆಹಾರ ಪದಾರ್ಥಗಳ ಖರೀದಿ ಮಾಡಿದೆ. ಈ ವೇಳೆ ಹಣದುಬ್ಬರವು ಪ್ರತಿಯೊಬ್ಬರನ್ನು ಹೇಗೆ ತೊಂದರೆಗೆ ತಳ್ಳಿದೆ ಎಂಬ ಬಗ್ಗೆ ವ್ಯಾಪಾರಿಗಳ ಬಳಿ ಚರ್ಚಿಸಿದ್ದನ್ನೂಅವರು ನೆನಪು ಮಾಡಿಕೊಂಡಿದ್ದಾರೆ.  

ನವದೆಹಲಿ: ‘ಬೆಲೆ ಏರಿಕೆಯಿಂದ ದಿನನಿತ್ಯದ ಅಗತ್ಯ ವಸ್ತುಗಳ ವಿಷಯದಲ್ಲಿ ರಾಜಿ ಮಾಡಿಕೊಳ್ಳುವ ಅನಿರ್ವಾಯತೆ ದೇಶದ ಜನತೆಗೆ ಎದುರಾಗಿದ್ದು, ಸರ್ಕಾರ ಮಾತ್ರ ಕುಂಭಕರ್ಣನಂತೆ ನಿದ್ದೆ ಮಾಡುತ್ತಿದೆ ಎಂದು ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ದೆಹಲಿಯ ಗಿರಿ ನಗರದಲ್ಲಿರುವ ತರಕಾರಿ ಮಾರುಕಟ್ಟೆಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಅವರು ಆಹಾರ ಪದಾರ್ಥಗಳ ಬೆಲೆ ಏರಿಕೆ ಕುರಿತು ಗೃಹಿಣಿಯರ ಜೊತೆ ಸಂವಾದ ನಡೆಸಿದ್ದಾರೆ. ಈ ಕುರಿತ ವಿಡಿಯೊವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಇಲ್ಲಿನ ಸ್ಥಳೀಯ ಮಾರುಕಟ್ಟೆಗೆ ತೆರಳಿ ಜನರೊಂದಿಗೆ ಆಹಾರ ಪದಾರ್ಥಗಳ ಖರೀದಿ ಮಾಡಿದೆ. ಈ ವೇಳೆ ಹಣದುಬ್ಬರವು ಪ್ರತಿಯೊಬ್ಬರನ್ನು ಹೇಗೆ ತೊಂದರೆಗೆ ತಳ್ಳಿದೆ ಎಂಬ ಬಗ್ಗೆ ವ್ಯಾಪಾರಿಗಳ ಬಳಿ ಚರ್ಚಿಸಿದ್ದನ್ನೂಅವರು ನೆನಪು ಮಾಡಿಕೊಂಡಿದ್ದಾರೆ.  

More articles

Latest article

Most read