ರಾಜ್ಯದಲ್ಲಿ ವಾಡಿಕೆಗಿಂತ ಶೇಕಡಾ 80ರಷ್ಟು ಹೆಚ್ಚುವರಿ ಮಳೆ, ಆದರೆ ಈ 3 ಜಿಲ್ಲೆಗಳಲ್ಲಿ ಕಡಿಮೆ ಮಳೆ ದಾಖಲು!

Most read

ಮುಂಗಾರು ಆರಂಭ ನಂತರ ಕೇವಲ 10 ದಿನಗಳಲ್ಲಿ ವಾಡಿಕೆಗಿಂತ ಶೇಕಡಾ 80ರಷ್ಟು ಹೆಚ್ಚುವರಿ ಮಳೆ ದಾಖಲಾಗಿದೆ.

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಜೂನ್ 1 ರಿಂದ ಪ್ರತಿವರ್ಷ ಸರಾಸರಿ ಮಳೆ 47.6 ಮಿಮೀ ಮಳೆ ಸುರಿಯುತ್ತದೆ. ಆದರೆ ಈ ವರ್ಷ ರಾಜ್ಯದಲ್ಲಿ ಇದುವರೆಗೆ 85.6 ಮಿಮೀ ಮಳೆಯಾಗಿದೆ.

ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ದಾಖಲಾಗಿದೆ. ಈ ಜಿಲ್ಲೆಗಳಲ್ಲಿ ಅನುಕ್ರಮವಾಗಿ ಶೇಕಡಾ 26, ಶೇಕಡಾ 3 ಮತ್ತು ಶೇಕಡಾ 30ರಷ್ಟು ಮಳೆ ಕೊರತೆ ಈ ವರ್ಷ ಕಂಡುಬಂದಿದೆ. ಮಾಹಿತಿ ಪ್ರಕಾರ ಕರಾವಳಿ ಕರ್ನಾಟಕದಲ್ಲಿ ಶೇ.25ರಷ್ಟು ಅಧಿಕ ಮಳೆ ದಾಖಲಾಗಿದೆ.

ಸಾಮಾನ್ಯ ವಾಡಿಕೆಯ 155.6 ಮಿಮೀ ಮಳೆಗೆ ವಿರುದ್ಧವಾಗಿ, ಈ ಪ್ರದೇಶದಲ್ಲಿ 192.4 ಮಿಮೀ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಶೇಕಡಾ 140ರಷ್ಟು ಅಧಿಕ ಮಳೆ ದಾಖಲಾಗಿದೆ.

ವಿಜಯಪುರದಲ್ಲಿ ಗರಿಷ್ಠ 329%, ಬೆಂಗಳೂರು ಗ್ರಾಮಾಂತರದಲ್ಲಿ 272% ಅಧಿಕ ಮಳೆ ದಾಖಲಾಗಿದೆ. ರಾಮನಗರ ಮತ್ತು ವಿಜಯನಗರದಲ್ಲಿ ಶೇ.222ರಷ್ಟು ಅಧಿಕ ಮಳೆ ದಾಖಲಾಗಿದೆ. ಉಡುಪಿಯಲ್ಲಿ ಕನಿಷ್ಠ ಶೇ.5ರಷ್ಟು ಅಧಿಕ ಮಳೆ ದಾಖಲಾಗಿದೆ.

ಈ ವರ್ಷ ಮುಂಗಾರು ಮಳೆ ವಾಡಿಕೆಗಿಂತ ಮೊದಲೇ ಆಗಮಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ವಿಜ್ಞಾನಿ ಸಿಎಸ್ ಪಾಟೀಲ್ ಹೇಳಿದ್ದಾರೆ. ಕೆಲವು ಪ್ರದೇಶಗಳಲ್ಲಿ ಜೂನ್ 1 ರಿಂದ ಬಹುತೇಕ ಪ್ರತಿದಿನ ಮಳೆಯಾಗುತ್ತಿದೆ. ಆದರೆ, ಇನ್ನು ಮೂರು ದಿನಗಳ ನಂತರ, ಮಳೆಯಲ್ಲಿ ಇಳಿಮುಖವಾಗಲಿದೆ ಎಂದು ಹೇಳಿದ್ದಾರೆ.

More articles

Latest article