ರಾಜ್ಯಪಾಲರನ್ನು ವಾಪಸ್‌ ಕರೆಸಿಕೊಳ್ಳಿ: ರಾಷ್ಟ್ರಪತಿಗೆ ಒತ್ತಾಯಿಸಿದ ಕಾಂಗ್ರೆಸ್‌ ಶಾಸಕಾಂಗ

Most read

ರಾಜ್ಯ ಸರ್ಕಾರದ ವಿರುದ್ಧ ಪ್ರಾಸಿಕ್ಯೂಷನ್ ಅಸ್ತ್ರ ಪ್ರಯೋಗಿಸುತ್ತಿರುವ ರಾಜ್ಯಪಾಲ ಗೆಹಲೋತ್ ಅವರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕೆಂದು ಆಗ್ರಹಿಸಿ ರಾಷ್ಟ್ರಪತಿ ಬಳಿಗೆ ನಿಯೋಗ ಕೊಂಡೊಯ್ಯಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆಗ್ರಹಿಸಿದೆ. 

ಈ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ರಾಷ್ಟ್ರಪತಿ ಬಳಿಗೆ ನಿಯೋಗ ಒಯ್ಯಬೇಕು ಎಂಬ ಬಗ್ಗೆ ಹೈಕಮಾಂಡ್ ಜತೆ ಶುಕ್ರವಾರ ಚರ್ಚಿಸುವೆ. ಹೈಕಮಾಂಡ್ ಸಲಹೆಯಂತೆ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದದಾರೆ.

ಪ್ರಾಸಿಕ್ಯೂಷನ್ ವಿಚಾರದಲ್ಲಿ ವಿವೇಚನಾರಹಿತ ನಿರ್ಧಾರ ಹಾಗೂ ತಾರತಮ್ಯ ಧೋರಣೆ ಅನುಸರಿಸಿರುವ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ರಾಷ್ಟ್ರಪತಿಗಳ ಬಳಿಗೆ ನಿಯೋಗ ತೆರಳಿ ಒತ್ತಡ ಹಾಕೋಣ ಎಂದು ಶಾಸಕರೆಲ್ಲರೂ ಒಮ್ಮತದ ಆಗ್ರಹ ವ್ಯಕ್ತಪಡಿಸಿದ್ದು ಇಂದು ಹೈಕಮಾಂಡ್‌ ಜೊತೆ ಚರ್ಚೆ ಮಾಡಿ ಸಿಎಂ ಸಿದ್ದರಾಮಯ್ಯ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.

More articles

Latest article