Sunday, September 8, 2024

ಕಾಪಿ ರೈಟ್ಸ್ ಪ್ರಕರಣ: ನಟ ರಕ್ಷಿತ್ ಶೆಟ್ಟಿಗೆ ಬಂಧನ ಭೀತಿ, ಜಾಮೀನಿಗಾಗಿ ಕೋರ್ಟ್ ಮೊರೆ

Most read

ಕಾಪಿ ರೈಟ್ಸ್ ಉಲ್ಲಂಘನೆ ಆರೋಪದಲ್ಲಿ ಆರೋಪಿ ರಕ್ಷಿತ್ ಶೆಟ್ಟಿಬಂಧನದ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರಕ್ಷಿತ್ ಶೆಟ್ಟಿ ಜಾಮೀನಿಗಾಗಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಮೊರೆ ಹೋಗಿದ್ದಾರೆ.

ನಟ ರಕ್ಷಿತ್ ಶೆಟ್ಟಿ ಸಿಆರ್ಪಿಸಿ 438 ಅಡಿಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಿಸಿಎಚ್ 61 ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಜುಲೈ 24ಕ್ಕೆ ಮುಂದೂಡಿದ್ದು, ಈಗ ಬಂಧನದ ಭೀತಿ ಶುರುವಾಗಿದೆ.

ರಕ್ಷಿತ್ ಶೆಟ್ಟಿ ಒಡೆತನದ ಪರಂವಾ ಸ್ಟುಡಿಯೋಸ್ ನಿರ್ಮಾಣದ ಬ್ಯಾಚುಲರ್ಸ್ ಪಾರ್ಟಿ ಸಿನಿಮಾಗಾಗಿ ನ್ಯಾಯ ಎಲ್ಲಿದೆ ಸಾಂಗ್ ಅನಧಿಕೃತವಾಗಿ ಬಳಕೆ ಮಾಡಲಾಗಿದೆ ಎಂದು ಆರೋಪದಲ್ಲಿ ರಕ್ಷಿತ್ ಶೆಟ್ಟಿ ಸಿಲುಕಿದ್ದಾರೆ. ಈ ಕುರಿತು MRT ಮ್ಯೂಸಿಕ್ ಅವರು ದೂರು ನೀಡಿದ್ದು, ‘ನ್ಯಾಯ ಎಲ್ಲಿದೆ’, ‘ಒಮ್ಮೆ ನಿನ್ನನ್ನು..’ ಹಾಡುಗಳ ಬಳಕೆ. ಅನುಮತಿ ಪಡೆಯದೆ ,ಕಾನೂನು ಬಾಹಿರವಾಗಿ ಬಳಕೆ ಮಾಡಿಕೊಂಡಿದ್ದಾರೆಂದು ಆರೋಪಿಸಿ ಕೇಸ್ ದಾಖಲಾಗಿದೆ. ಕಾಪಿ ರೈಟ್ಸ್ ಆ್ಯಕ್ಸ್ ಸೆ. 63 ರಡಿ ನಟ ರಕ್ಷಿತ್ ಶೆಟ್ಟಿ ವಿರುದ್ಧ FIR ದಾಖಲು ಮಾಡಲಾಗಿತ್ತು.

More articles

Latest article