ಪೆಬ್ರವರಿ 21 ರಂದು ಕಿತ್ತೂರಿನಲ್ಲಿ ರಾಣಿ ಚೆನ್ನಮ್ಮ ಪ್ರತಿರೋಧ ದಿನ ಆಚರಣೆ

1824ರಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಸ್ವಾತಂತ್ರ್ಯದ ರಣಕಹಳೆಯನ್ನು ಮೊಳಗಿಸಿ ಇಂದಿಗೆ ಎರಡು ನೂರು ವರ್ಷಗಳು ಸಂದಿವೆ. ಈ ಸಂದರ್ಭದಲ್ಲಿ ದೇಶಾದ್ಯಂತ ರಾಣಿ ಚೆನ್ನಮ್ಮ ಅವರ ಪ್ರತಿರೋಧದ ವರ್ಷಾಚರಣೆಯನ್ನು ಮಾಡಲು ‘ನಾನೂ ರಾಣಿ ಚೆನ್ನಮ್ಮ’ ಎಂಬ ಘೋಷವಾಕ್ಯದೊಂದಿಗೆ ಸುಮಾರು ಐವತ್ತಕ್ಕೂ ಹೆಚ್ಚು ಸಂಘಟನೆಗಳು ಜೊತೆಗೂಡಿ ನಿರ್ಧರಿಸಿವೆ.

ಪ್ರತಿಕಾಗೋಷ್ಠಿಯನ್ನು ನಡೆಸಿದ ಒಕ್ಕೂಟವು, ಕಿತ್ತೂರು ರಾಣಿ ಚೆನ್ನಮ್ಮ 1778 ಅಕ್ಟೋಬರ್ 23 ರಂದು ಬೆಳಗಾವಿ ಸಮೀಪದ ಕಾಕತಿಯಲ್ಲಿ ಜನಿಸಿದ್ದು, ಚಿಕ್ಕವಯಸ್ಸಿನಲ್ಲೇ ಕತ್ತಿವರಸೆ, ಕುದುರೆ ಸವಾರಿ ಮತ್ತು ಬಿಲ್ಲುವಿದ್ಯೆಗಳನ್ನು ಕಲಿತ ಚೆನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಡಿ ಕಿತ್ತೂರನ್ನು ಉಳಿಸಿಕೊಳ್ಳಲು ತನ್ನ ಸಂಪೂರ್ಣ ಜೀವನವನ್ನೇ ಮುಡಿಪಾಗಿಟ್ಟಿದ್ದಳು, ಎಂದು ಹೇಳಿತು.

‘ಬ್ರಿಟಿಷರ ವಸಾಹತುಶಾಹಿಯ ವಿರುದ್ಧ ಭಾರತದಲ್ಲಿ ಹೋರಾಡಿದ ಮೊಟ್ಟಮೊದಲ ಮಹಿಳಾ ಹೋರಾಟಗಾರರ ಪಟ್ಟಿಯಲ್ಲಿ ರಾಣಿ ಚೆನ್ನಮ್ಮ ಬರುತ್ತಾಳೆ. ಕರ್ನಾಟಕದ ಜನಪದರಲ್ಲಿ ಅವರಿಗೆ ಸದಾ ಗೌರವ, ಅಭಿಮಾನದ ಸ್ಥಾನವಿದೆ. ವೀರರಾಣಿ ಎಂದೇ ಎಲ್ಲರೂ ಆಕೆಯನ್ನು ನೆನೆಯುತ್ತಾರೆ’ ಎಂದು ವಕೀಲರಾದ ಅಖಿಲಾ ವಿದ್ಯಾಸಂದ್ರ ಹೇಳಿದರು.

ನಮ್ಮ ಪ್ರಜಾಪ್ರಭುತ್ವವನ್ನು, ಸಂವಿಧಾನವನ್ನು ಸಂರಕ್ಷಿಸುವುದಕ್ಕಾಗಿ ಮತ್ತು ದ್ವೇಷ ಅಳಿಸಿ ಪ್ರೀತಿ ಬೆಳೆಸುವುದಕ್ಕಾಗಿ ಭಾರತದ ಎಲ್ಲಾ ಮೂಲೆಗಳಿಂದ ಮಹಿಳೆಯರು ಬರುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಹೋರಾಟ ಮತ್ತು ಸಾಮಾಜಿಕ ಸಂಘಟನೆಯಲ್ಲಿ ನಿರತರಾಗಿರುವ ಅನೇಕ ಪ್ರಮುಖರು ಕಿತ್ತೂರಿನಲ್ಲಿ ನಡೆಯುವ ಜಾಥಾದಲ್ಲಿ ಭಾಗವಹಿಸುವರು. ಕರ್ನಾಟಕದ ಹೆಮ್ಮೆಯ ಕಿತ್ತೂರು ರಾಣಿ ಚೆನ್ನಮ್ಮನ ಕೆಚ್ಚೆದೆಯ ಹೋರಾಟವನ್ನು ನೆನೆಯಲು ಮತ್ತು ಸ್ಪೂರ್ತಿ ಪಡೆಯಲು 21/02/2024ರಂದು ಎಲ್ಲೆರೂ ಬನ್ನಿ ಕಿತ್ತೂರಿಗೆ ಎಂದು ಮೀನಾಕ್ಷಿ ಬಾಳಿ ಕರೆಕೊಟ್ಟರು.

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ, ಸಮಾಜ ಪರಿವರ್ತನ ಸಮುದಾಯ – ಧಾರವಾಡ, ಮಹಿಳಾ ಮುನ್ನಡೆ, ನಾವೆದ್ದು ನಿಲ್ಲದಿದ್ದರೆ, ರಾಷ್ಟ್ರ ಸೇವಾದಳ, ಸಮತಾ ವೇದಿಕೆ, ಸೌಹಾರ್ದ ಕರ್ನಾಟಕ, ಹೀಗೆ ಹಲವು ಸಂಘಟನೆಗಳು ಒಟ್ಟಾಗಿ ಸೇರಲು ಮುಂದೆ ಬಂದಿವೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜ್ಯೋತಿ ಎ. ಮಮತಾ, ಗೀತಾ ಮೆನನ್, ಗೀತಾ ಮುಂತಾದವರು ಉಪಸ್ಥಿತರಿದ್ದರು.

1824ರಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಸ್ವಾತಂತ್ರ್ಯದ ರಣಕಹಳೆಯನ್ನು ಮೊಳಗಿಸಿ ಇಂದಿಗೆ ಎರಡು ನೂರು ವರ್ಷಗಳು ಸಂದಿವೆ. ಈ ಸಂದರ್ಭದಲ್ಲಿ ದೇಶಾದ್ಯಂತ ರಾಣಿ ಚೆನ್ನಮ್ಮ ಅವರ ಪ್ರತಿರೋಧದ ವರ್ಷಾಚರಣೆಯನ್ನು ಮಾಡಲು ‘ನಾನೂ ರಾಣಿ ಚೆನ್ನಮ್ಮ’ ಎಂಬ ಘೋಷವಾಕ್ಯದೊಂದಿಗೆ ಸುಮಾರು ಐವತ್ತಕ್ಕೂ ಹೆಚ್ಚು ಸಂಘಟನೆಗಳು ಜೊತೆಗೂಡಿ ನಿರ್ಧರಿಸಿವೆ.

ಪ್ರತಿಕಾಗೋಷ್ಠಿಯನ್ನು ನಡೆಸಿದ ಒಕ್ಕೂಟವು, ಕಿತ್ತೂರು ರಾಣಿ ಚೆನ್ನಮ್ಮ 1778 ಅಕ್ಟೋಬರ್ 23 ರಂದು ಬೆಳಗಾವಿ ಸಮೀಪದ ಕಾಕತಿಯಲ್ಲಿ ಜನಿಸಿದ್ದು, ಚಿಕ್ಕವಯಸ್ಸಿನಲ್ಲೇ ಕತ್ತಿವರಸೆ, ಕುದುರೆ ಸವಾರಿ ಮತ್ತು ಬಿಲ್ಲುವಿದ್ಯೆಗಳನ್ನು ಕಲಿತ ಚೆನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಡಿ ಕಿತ್ತೂರನ್ನು ಉಳಿಸಿಕೊಳ್ಳಲು ತನ್ನ ಸಂಪೂರ್ಣ ಜೀವನವನ್ನೇ ಮುಡಿಪಾಗಿಟ್ಟಿದ್ದಳು, ಎಂದು ಹೇಳಿತು.

‘ಬ್ರಿಟಿಷರ ವಸಾಹತುಶಾಹಿಯ ವಿರುದ್ಧ ಭಾರತದಲ್ಲಿ ಹೋರಾಡಿದ ಮೊಟ್ಟಮೊದಲ ಮಹಿಳಾ ಹೋರಾಟಗಾರರ ಪಟ್ಟಿಯಲ್ಲಿ ರಾಣಿ ಚೆನ್ನಮ್ಮ ಬರುತ್ತಾಳೆ. ಕರ್ನಾಟಕದ ಜನಪದರಲ್ಲಿ ಅವರಿಗೆ ಸದಾ ಗೌರವ, ಅಭಿಮಾನದ ಸ್ಥಾನವಿದೆ. ವೀರರಾಣಿ ಎಂದೇ ಎಲ್ಲರೂ ಆಕೆಯನ್ನು ನೆನೆಯುತ್ತಾರೆ’ ಎಂದು ವಕೀಲರಾದ ಅಖಿಲಾ ವಿದ್ಯಾಸಂದ್ರ ಹೇಳಿದರು.

ನಮ್ಮ ಪ್ರಜಾಪ್ರಭುತ್ವವನ್ನು, ಸಂವಿಧಾನವನ್ನು ಸಂರಕ್ಷಿಸುವುದಕ್ಕಾಗಿ ಮತ್ತು ದ್ವೇಷ ಅಳಿಸಿ ಪ್ರೀತಿ ಬೆಳೆಸುವುದಕ್ಕಾಗಿ ಭಾರತದ ಎಲ್ಲಾ ಮೂಲೆಗಳಿಂದ ಮಹಿಳೆಯರು ಬರುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಹೋರಾಟ ಮತ್ತು ಸಾಮಾಜಿಕ ಸಂಘಟನೆಯಲ್ಲಿ ನಿರತರಾಗಿರುವ ಅನೇಕ ಪ್ರಮುಖರು ಕಿತ್ತೂರಿನಲ್ಲಿ ನಡೆಯುವ ಜಾಥಾದಲ್ಲಿ ಭಾಗವಹಿಸುವರು. ಕರ್ನಾಟಕದ ಹೆಮ್ಮೆಯ ಕಿತ್ತೂರು ರಾಣಿ ಚೆನ್ನಮ್ಮನ ಕೆಚ್ಚೆದೆಯ ಹೋರಾಟವನ್ನು ನೆನೆಯಲು ಮತ್ತು ಸ್ಪೂರ್ತಿ ಪಡೆಯಲು 21/02/2024ರಂದು ಎಲ್ಲೆರೂ ಬನ್ನಿ ಕಿತ್ತೂರಿಗೆ ಎಂದು ಮೀನಾಕ್ಷಿ ಬಾಳಿ ಕರೆಕೊಟ್ಟರು.

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ, ಸಮಾಜ ಪರಿವರ್ತನ ಸಮುದಾಯ – ಧಾರವಾಡ, ಮಹಿಳಾ ಮುನ್ನಡೆ, ನಾವೆದ್ದು ನಿಲ್ಲದಿದ್ದರೆ, ರಾಷ್ಟ್ರ ಸೇವಾದಳ, ಸಮತಾ ವೇದಿಕೆ, ಸೌಹಾರ್ದ ಕರ್ನಾಟಕ, ಹೀಗೆ ಹಲವು ಸಂಘಟನೆಗಳು ಒಟ್ಟಾಗಿ ಸೇರಲು ಮುಂದೆ ಬಂದಿವೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜ್ಯೋತಿ ಎ. ಮಮತಾ, ಗೀತಾ ಮೆನನ್, ಗೀತಾ ಮುಂತಾದವರು ಉಪಸ್ಥಿತರಿದ್ದರು.

More articles

Latest article

Most read