ಬೆಂಗಳೂರು : ಆಗ್ನೇಯ ವಿಭಾಗದ ಪೊಲೀಸ್ ಠಾಣೆಯ ಕ್ರೈಮ್ ವಿಭಾಗದ ಇನ್ಸ್ಪೆಕ್ಟರ್ ರವಿ ಕೆ.ಬಿ. ಅವರು ತನಿಖೆಗಾಗಿ ಮಧ್ಯಪ್ರದೇಶಕ್ಕೆ ತೆರಳಿದ್ದ ಸಂದರ್ಭದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಗೃಹ ಸಚಿವ ಪ್ರಿಯಾಂಕರ್ ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿರುವ ಅವರು ಅಗಲಿದ ಸುದ್ದಿ ತಿಳಿದು ಅತೀವ ದುಃಖವಾಯಿತು ಎಂದಿದ್ದಾರೆ.
ಕರ್ತವ್ಯನಿಷ್ಠ ಹಾಗೂ ಸಮರ್ಪಣಾ ಮನೋಭಾವದ ಅಧಿಕಾರಿಯೊಬ್ಬರನ್ನು ಕಳೆದುಕೊಂಡಿರುವುದು ಪೊಲೀಸ್ ಇಲಾಖೆಗೆ ತುಂಬಲಾರದ ನಷ್ಟ. ಅವರ ಅಗಲಿಕೆಯಿಂದ ಕುಟುಂಬ ವರ್ಗದವರಿಗೆ ಮತ್ತು ಸ್ನೇಹಿತರ ವರ್ಗಕ್ಕೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಆಶಿಸುತ್ತೇನೆ ಎಂದು ಹೇಳಿದ್ದಾರ

