ಆರ್‌ ಸಿಬಿ ದುರಂತ: ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಹೊಸ ಶಿಷ್ಟಾಚಾರ ನಿಯಮ ಜಾರಿ: ಸಚಿವ ಪರಮೇಶ್ವರ್

Most read

ಬೆಂಗಳೂರು: ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಸರ್ಕಾರ ಯಾವುದೇ ವಿಜಯೋತ್ಸವ, ಸಭೆ ಅಥವಾ ಸಮಾರಂಭಗಳನ್ನು ಆಯೋಜಿಸುವಾಗ ಪೊಲೀಸ್ ಇಲಾಖೆಯ ಮಾರ್ಗದರ್ಶನದಲ್ಲಿಯೇ ನಡೆಸಬೇಕು ಎಂದು ಹೊಸ ಶಿಷ್ಟಾಚಾರ ನಿಯಮಗಳನ್ನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.
ಆರ್‌ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಉಂಟಾಗಿ 11 ಅಮಾಯಕರು ಜೀವ ತೆತ್ತ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರೂ ಇದ್ದರು. ಕಾಲ್ತುಳಿತ ನಡೆದ ಗೇಟ್ ನಂ 15,16,17,18,19,20 ಅನ್ನು ಪರಿಶೀಲಿಸಿದರು.

ನಂತರ ಮಾತನಾಡಿದ ಅವರು ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಸರ್ಕಾರ ಯಾವುದೇ ವಿಜಯೋತ್ಸವ, ಸಭೆ ಅಥವಾ ಸಮಾರಂಭಗಳನ್ನು ಆಯೋಜಿಸುವಾಗ ಪೊಲೀಸ್ ಇಲಾಖೆಯ ಮಾರ್ಗದರ್ಶನದಲ್ಲಿಯೇ ನಡೆಸಬೇಕು ಎಂದು ಹೊಸ ಶಿಷ್ಟಾಚಾರಗಳನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದರು.

ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಈ ರೀತಿ ಕ್ರಿಕೆಟ್ ಇತಿಹಾಸದಲ್ಲಿ ಯಾವತ್ತೂ ಆಗಿರಲಿಲ್ಲ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶ ಮಾಡಲಾಗಿದೆ. ತಪ್ಪಿತಸ್ಥರು ಯಾರೇ ಇದ್ರೂ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಕಾಲ್ತುಳಿತಕ್ಕೆ ಅಸಲಿ ಕಾರಣಗಳು ತಿಳಿಯಬೇಕು. ಕಾರಣ ಗೊತ್ತಾದ ಬಳಿಕವಷ್ಟೇ ಯಾರು ಹೊಣೆ ಎನ್ನುವುದನ್ನು ಗುರುತಿಸಬಹುದು. ಸಧ್ಯಕ್ಕೆ ಯಾರನ್ನೂ ಹೊಣೆ ಮಾಡಲಾಗದು. ಯುವಕರು ಬೆಂಗಳೂರಿನ ಬೀದಿಬೀದಿಗಳಲ್ಲಿ ಸಂಭ್ರಮಿಸಿದರು. ಕಾಲೇಜಿಗೆ ಹೋಗುತ್ತೇವೆಂದು ವಿಜಯೋತ್ಸವಕ್ಕೆ ಬಂದಿದ್ದಾರೆ ಎಂದರು.

More articles

Latest article