ನವದೆಹಲಿ: ಭಾರತದ ಆರ್ಥಿಕತೆ ಐಸಿಯುನಲ್ಲಿದೆ ಎನ್ನುವುದು ಭಾರತೀಯರೆಲ್ಲರಿಗೂ ತಿಳಿದ ವಿಚಾರವೇ ಆಗಿದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಇಂದು ಛೇಡಿಸಿದ್ದಾರೆ
ಸಂಸತ್ ಭವನದ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶೇ. 25ಕ್ಕಿಂತ ಹೆಚ್ಚು ಯುವಜನತೆ ನಿರುದ್ಯೋಗದಿಂದ ಬಳಲುತ್ತಿದ್ದಾರೆ. ಪತ್ರಿಕಾ ಸ್ವಾತಂತ್ರ್ಯ, ಉತ್ಪಾದನೆಯಂತಹ ವಲಯಗಳ ಜಾಗತಿಕ ಸೂಚ್ಯಂಕದಲ್ಲೂ ನಿರಂತರ ಕುಸಿತು ಕಾಣುತ್ತಿದೆ ಎಂದು ಹೇಳಿದ್ದಾರೆ.
ಬಹಳ ದಿನಗಳ ಹಿಂದಿನಿಂದಲೂ ಈ ಕಟುಸತ್ಯವನ್ನು ಹೇಳುತ್ತಲೇ ಬಂದಿದ್ದೇವೆ. ಭಾರತದ ಆರ್ಥಿಕತೆ ಐಸಿಯುನಲ್ಲಿದೆ. ಆದರೆ ವಿರೋಧ ಪಕ್ಷಗಳು ಅದನ್ನು ಹೇಳಿದಾಗ ರಾಷ್ಟ್ರ ವಿರೋಧಿಗಳಾಗುತ್ತಾರೆ. ಈಗ ಪ್ರಧಾನಿ ಅವರ ಆಪ್ತ ಸ್ನೇಹಿತನೇ ಇದನ್ನು ಹೇಳಿದ್ದಾರೆ. ಹಾಗಾಗಿ ಈಗಾಲಾದರೂ ಪ್ರಧಾನಿ ಈ ಬಗ್ಗೆ ಹೆಚ್ಚಿನ ಗಮನ ವಹಿಸುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.
ಭಾರತದ ವಿರುದ್ಧ ಅಮೆರಿಕದ ಅಧ್ಯಕ್ಷರು ಹೇಳಿಕೆ ನೀಡಿರುವುದು ಮತ್ತು ಸುಂಕ ಹಾಗೂ ದಂಡ ಪ್ರಹಾರ ಮಾಡಿರುವುದು ನಿಜಕ್ಕೂ ಅವಮಾನಕರ ಎಂದೂ ಮಹುವಾ ಮೊಯಿತ್ರಾ ಹೇಳಿದ್ದಾರೆ.