ಬೆಂಗಳೂರು: ನಾನು ಶಕ್ತಿ ರಾಜಕಾರಣದಿಂದ ದೂರ ಇರುತ್ತೇನೆ ಆದರೆ ಚುನಾವಣಾ ರಾಜಕಾರಣದಿಂದ ಮಾತ್ರ ದೂರ ಇರುತ್ತೇನೆ. ಇಂದು ಚುನಾವಣಾ ವ್ಯವಸ್ಥೆ ಹದಗೆಟ್ಟಿದೆ. ಆದರೆ ಈ ಸಮಾಜದಲ್ಲಿ ಸಮಾನತೆಯ ಹೋರಾಟದಲ್ಲಿ ಕೊನೆಯವರೆಗೂ ನಿಮ್ಮೊಂದಿಗೆ ಇರಲಿದ್ದೇನೆ, ನೀವು ಯಾರೂ ಆತಂಕ ಪಡಬೇಕಾದ ಅಗತ್ಯವಿಲ್ಲ” ಎಂದು ರಾಜ್ಯದ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸಿದ್ದರಾಮಯ್ಯ ಅವರು ಇಂದು ಅರಮನೆ ಮೈದಾನದಲ್ಲಿ ನಡೆದ ಹಿಂದುಳಿದ ಜಾತಿಗಳ ಒಕ್ಕೂಟದ ಬೆಳ್ಳಿಹಬ್ಬದ ಸಮಾವೇಶದಲ್ಲಿ ನೆರೆದ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಸಮಾಜದಲ್ಲಿ ಇನ್ನೂ ಸಮಾನತೆ ಬಂದಿಲ್ಲ, ಜಾತಿ ವ್ಯವಸ್ತೆ ಇರುವವರೆಗೂ ಹೋರಾಟ ಇರಬೇಕಾಗುತ್ತದೆ. ಸಾವಿರಾರು ವರ್ಷಗಳಿಂದ ಅಲಿಖಿತ ಸಂವಿಧಾನವಾಗಿ ಮನುಸ್ಮೃತಿ ಜಾರಿಯಲ್ಲಿತ್ತು. ಅದು ಶ್ರೇಣೀಕೃತ ವ್ಯವಸ್ಥೆ ಹುಟ್ಟುಹಾಕಿತ್ತು. ಆದರೆ ಈ ದೇಶದಲ್ಲಿ ಒಂದು ದಿನ ಸಮಾನತೆಯ ಸಮಾಜ ನಿರ್ಮಾಣ ಆಗುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಶೈಕ್ಷಣಿಕ ಸಮಾಜಿಕ ಸಮೀಕ್ಷೆಯಾಗಬೇಕು ಎಂಬ ಉದ್ದೇಶದಿಂದ ನಾನು ಕಾಂತರಾಜ್ ಆಯೋಗ ನೇಮಿಸಿದ್ದೆ, ಆದರೆ ವರದಿ ಆ ಅವಧಿಯಲ್ಲಿ ತಯಾರಾಗಲಿಲ್ಲ. ನಂತರ ವರದಿಯನ್ನು ಸ್ವೀಕರಿಸಲು ಎಚ್ ಡಿ ಕುಮಾರಸ್ವಾಮಿಯವರು ಒಪ್ಪಲಿಲ್ಲ. ನಂತರ ಮತ್ತೆ ಮುಖ್ಯಂಮತ್ರಿ ಆಗುವ ವೇಳೆಗೆ ಮಧುಸೂಧನ್ ನಾಯ್ಕ್ ಅವರ ಆಯೋಗ ನೇಮಿಸಿ ಅದು ತನ್ನ ವರದಿ ನೀಡಿದೆ. ನಾನು ಮುಖ್ಯಮಂತ್ರಿ ಹುದ್ದೆಯಿಂದ ಇಳಿಯುವ ಸಂದರ್ಭದಲ್ಲಿ ಆ ವರದಿಯನ್ನು ಸ್ವೀಕಾರ ಮಾಡಿದ್ದೇನೆ.
ನಮ್ಮ ಪಕ್ಷ, ನಮ್ಮ ಸರ್ಕಾರ ಹಾಗೂ ಮುಖ್ಯಮಂತ್ರಿಗಳು ಇದನ್ನು ಜಾರಿಗೊಳಿಸುತ್ತಾರೆ ಎಂಬ ನಂಬಿಕೆ ಇದೆ. ನಮ್ಮ ರಾಜ್ಯದಲ್ಲಿ 75% ಮೀಸಲಾತಿ ದಲಿತರು ಮತ್ತು ಹಿಂದುಳಿದ ವರ್ಗಗಳಿಗೆ ಶಿಕ್ಷಣ, ಉದ್ಯೋಗ ಮತ್ತು ರಾಜಕೀಯದಲ್ಲಿ ಸಿಗಲೇಬೇಕು. ಜಾತಿಗಳ ಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಕ್ಕಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ” ಎಂದು ಸಿದ್ದರಾಮಯ್ಯ ಹೇಳಿದರು.
ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಬೈರತಿ ಸುರೇಶ್ ಮೊದಲಾದವರು ಹಾಜರಿದ್ದರು.
ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಜಾರಿಯಾಗಬೇಕು: ಸಿದ್ದರಾಮಯ್ಯ
ಬೆಂಗಳೂರು: ನಾನು ಶಕ್ತಿ ರಾಜಕಾರಣದಿಂದ ದೂರ ಇರುತ್ತೇನೆ ಆದರೆ ಚುನಾವಣಾ ರಾಜಕಾರಣದಿಂದ ಮಾತ್ರ ದೂರ ಇರುತ್ತೇನೆ. ಇಂದು ಚುನಾವಣಾ ವ್ಯವಸ್ಥೆ ಹದಗೆಟ್ಟಿದೆ. ಆದರೆ ಈ ಸಮಾಜದಲ್ಲಿ ಸಮಾನತೆಯ ಹೋರಾಟದಲ್ಲಿ ಕೊನೆಯವರೆಗೂ ನಿಮ್ಮೊಂದಿಗೆ ಇರಲಿದ್ದೇನೆ, ನೀವು ಯಾರೂ ಆತಂಕ ಪಡಬೇಕಾದ ಅಗತ್ಯವಿಲ್ಲ” ಎಂದು ರಾಜ್ಯದ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸಿದ್ದರಾಮಯ್ಯ ಅವರು ಇಂದು ಅರಮನೆ ಮೈದಾನದಲ್ಲಿ ನಡೆದ ಹಿಂದುಳಿದ ಜಾತಿಗಳ ಒಕ್ಕೂಟದ ಬೆಳ್ಳಿಹಬ್ಬದ ಸಮಾವೇಶದಲ್ಲಿ ನೆರೆದ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಸಮಾಜದಲ್ಲಿ ಇನ್ನೂ ಸಮಾನತೆ ಬಂದಿಲ್ಲ, ಜಾತಿ ವ್ಯವಸ್ತೆ ಇರುವವರೆಗೂ ಹೋರಾಟ ಇರಬೇಕಾಗುತ್ತದೆ. ಸಾವಿರಾರು ವರ್ಷಗಳಿಂದ ಅಲಿಖಿತ ಸಂವಿಧಾನವಾಗಿ ಮನುಸ್ಮೃತಿ ಜಾರಿಯಲ್ಲಿತ್ತು. ಅದು ಶ್ರೇಣೀಕೃತ ವ್ಯವಸ್ಥೆ ಹುಟ್ಟುಹಾಕಿತ್ತು. ಆದರೆ ಈ ದೇಶದಲ್ಲಿ ಒಂದು ದಿನ ಸಮಾನತೆಯ ಸಮಾಜ ನಿರ್ಮಾಣ ಆಗುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಶೈಕ್ಷಣಿಕ ಸಮಾಜಿಕ ಸಮೀಕ್ಷೆಯಾಗಬೇಕು ಎಂಬ ಉದ್ದೇಶದಿಂದ ನಾನು ಕಾಂತರಾಜ್ ಆಯೋಗ ನೇಮಿಸಿದ್ದೆ, ಆದರೆ ವರದಿ ಆ ಅವಧಿಯಲ್ಲಿ ತಯಾರಾಗಲಿಲ್ಲ. ನಂತರ ವರದಿಯನ್ನು ಸ್ವೀಕರಿಸಲು ಎಚ್ ಡಿ ಕುಮಾರಸ್ವಾಮಿಯವರು ಒಪ್ಪಲಿಲ್ಲ. ನಂತರ ಮತ್ತೆ ಮುಖ್ಯಂಮತ್ರಿ ಆಗುವ ವೇಳೆಗೆ ಮಧುಸೂಧನ್ ನಾಯ್ಕ್ ಅವರ ಆಯೋಗ ನೇಮಿಸಿ ಅದು ತನ್ನ ವರದಿ ನೀಡಿದೆ. ನಾನು ಮುಖ್ಯಮಂತ್ರಿ ಹುದ್ದೆಯಿಂದ ಇಳಿಯುವ ಸಂದರ್ಭದಲ್ಲಿ ಆ ವರದಿಯನ್ನು ಸ್ವೀಕಾರ ಮಾಡಿದ್ದೇನೆ.
ನಮ್ಮ ಪಕ್ಷ, ನಮ್ಮ ಸರ್ಕಾರ ಹಾಗೂ ಮುಖ್ಯಮಂತ್ರಿಗಳು ಇದನ್ನು ಜಾರಿಗೊಳಿಸುತ್ತಾರೆ ಎಂಬ ನಂಬಿಕೆ ಇದೆ. ನಮ್ಮ ರಾಜ್ಯದಲ್ಲಿ 75% ಮೀಸಲಾತಿ ದಲಿತರು ಮತ್ತು ಹಿಂದುಳಿದ ವರ್ಗಗಳಿಗೆ ಶಿಕ್ಷಣ, ಉದ್ಯೋಗ ಮತ್ತು ರಾಜಕೀಯದಲ್ಲಿ ಸಿಗಲೇಬೇಕು. ಜಾತಿಗಳ ಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಕ್ಕಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ” ಎಂದು ಸಿದ್ದರಾಮಯ್ಯ ಹೇಳಿದರು.
ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಬೈರತಿ ಸುರೇಶ್ ಮೊದಲಾದವರು ಹಾಜರಿದ್ದರು.

