ಮಲ್ಲೇಶ್ವರಂನಲ್ಲಿ ಸುಡುವ ಬಿಸಿಲಲ್ಲೇ ಸಿದ್ಧರಾಮಯ್ಯ ಭರ್ಜರಿ ರೋಡ್ ಶೋ

Most read

ಬೆಂಗಳೂರು: ಸುಡುವ ಬಿಸಿಲಿನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಮಲ್ಲೇಶ್ವರಂ, ಸುಬ್ರಹ್ಮಣ್ಯನಗರ, ಗಾಯತ್ರಿನಗರದ ರಸ್ತೆಯಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ರಸ್ತೆಯ ಇಕ್ಕೆಲಗಳಲ್ಲಿ ನೆರೆದ ಸಾವಿರಾರು ಮಂದಿ ನಾಗರಿಕರು ಮುಖ್ಯಮಂತ್ರಿಗಳ ಫೊಟೋ, ವಿಡಿಯೋಗಳನ್ನು ತೆಗೆದುಕೊಂಡಿದ್ದು ವಿಶೇಷವಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಸೂರ್ಯ ಪೂರ್ವದಲ್ಲಿ ಹುಟ್ಟೋದು ಎಷ್ಟು ಸತ್ಯವೋ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಪ್ರೊ.ರಾಜೀವ್ ಗೌಡ ಗೆಲ್ಲೋದು ಅಷ್ಟೇ ಸತ್ಯ ಎಂದು ಖಚಿತವಾಗಿ ನುಡಿದರು.

ಕೇಂದ್ರ ಕೃಷಿ ಸಚಿವೆಯಾಗಿದ್ದ ಶೋಭಾ ಕರಂದ್ಲಾಜೆ ರಾಜ್ಯದ ರೈತರ ಪರವಾಗಿ ಯಾವ ಕೆಲಸಗಳನ್ನೂ ಮಾಡಲಿಲ್ಲ. ಸಂಸದೆಯಾಗಿಯೂ ನಾಡಿನ ಪರವಾಗಿ ಕೆಲಸ ಮಾಡಲಿಲ್ಲ. ಇಂಥವರಿಗೆ ಬೆಂಬಲಿಸಿದರೆ ನಿಮ್ಮ ಮತಕ್ಕೆ ಗೌರವ ಬರುತ್ತದಾ ಎಂದು ಅವರು ಪ್ರಶ್ನಿಸಿದರು.

ಈ ಭಾಗದಲ್ಲಿ ಸುಮಾರು ಎರಡು ಗಂಟೆಗಳ ಕಾಲ ರೋಡ್ ಶೋ ನಡೆದ ನಂತರ ಮಹಾಲಕ್ಷ್ಮಿಪುರಂನತ್ತ ಸಿದ್ಧರಾಮಯ್ಯ ತೆರಳಿದರು.

More articles

Latest article