ಹಾವೇರಿ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ ಪರಿಹಾರ: ಸಿಎಂ ಸಿದ್ದರಾಮಯ್ಯ ಘೋಷಣೆ

Most read

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು- ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಮಂದಿಯ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿದ್ದಾರೆ.

ಅಪಘಾತದಲ್ಲಿ ಮೃತಪಟ್ಟ ಸುದ್ದಿಕೇಳಿ ಆಘಾತವಾಗಿದೆ. ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರ ಚಿಕಿತ್ಸೆಯನ್ನು ಸರ್ಕಾರ ಭರಿಸಲಿದೆ ಎಂದು ದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

More articles

Latest article