ಗಣಿ ಗುತ್ತಿಗೆ ಹಗರಣ| ಅಗತ್ಯಬಿದ್ದರೆ ಮುಲಾಜಿಲ್ಲದೆ ಕುಮಾರಸ್ವಾಮಿ ಬಂಧನ: ಸಿಎಂ ಸಿದ್ದರಾಮಯ್ಯ

Most read

ಕೇಂದ್ರ ಸಚಿವ ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧನಕ್ಕೊಳಪಡಿಸುತ್ತೇವೆಂದು ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ಆಲಮಟ್ಟಿಗೆ ಬಾಗಿನ ಅರ್ಪಿಸಲು ತೆರಳುವ‌ ಮೊದಲು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧಿಸುತ್ತೇವೆ. ಆದರೆ ಈಗ ಇನ್ನೂ ಬಂಧಿಸುವ ಸನ್ನಿವೇಶ ಬಂದಿಲ್ಲ ಎಂದಿದ್ದಾರೆ.

ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ SIT ಯವರು ತನಿಖಾ ವರದಿ ನೀಡಿ ಗೆ ಅನುಮತಿ ಕೋರಿದ್ದಾಗ್ಯೂ ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, SIT ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ನನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲದೆ ಮತ್ತೇನು ಎಂದು ಖಾರವಾಗಿ ಪ್ರಶ್ನಿಸಿದರು.

ಕುಮಾರಸ್ವಾಮಿಯವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾತಿಯನ್ನು ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಚಾರದ ಬಗ್ಗೆ ತನಗೆ ಮಾಹಿತಿಯಿಲ್ಲ. ಕುಮಾರಸ್ವಾಮಿ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಅವರ ಮಾತುಗಳು ಹಿಟ್ ಅಂಡ್ ರನ್ ನಂತೆ ಇರುತ್ತವೆ. ಜೇಬಿನಲ್ಲಿ ಪೆನ್ ಡ್ರೈವ್ ಇದೆ ಎಂದರು. ಒಂದೂ ದಿನ ತೋರಿಸಲಿಲ್ಲ. ನೀವು ಕುಮಾರಸ್ವಾಮಿ ಹೇಳುವುದನ್ನು ಕೇಳುತ್ತಿದ್ದರಲ್ಲ ಎಂದು ಪ್ರಶ್ನಿಸಿದರು.

More articles

Latest article