ದೀಪಾವಳಿ ಹಬ್ಬಕ್ಕೆ ವಿಶೇಷ ರೈಲುಗಳ ಸಂಚಾರ : ಇಲ್ಲಿದೆ ಕಂಪ್ಲಿಟ್‌ ಮಾಹಿತಿ

Most read

ನೈರುತ್ಯ ರೈಲ್ವೆಯು ಬೆಂಗಳೂರಿನಿಂದ ಚೆನ್ನೈ, ಹುಬ್ಬಳ್ಳಿ ಮಂಗಳೂರು ನಡುವೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಅಧಿಕವಾಗುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿರ್ವಹಿಸಲು ವಿಶೇಷ ರೈಲು ಓಡಿಸಲು ನಿರ್ಧರಿಸಲಾಗಿದೆ.
ಹಬ್ಬದ ವಿಶೇಷವಾಗಿ ಜನದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವಂತೆ ನೈರುತ್ಯ ರೈಲ್ವೆಯು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು – ಚೆನ್ನೈ ಎಗ್ಮೋರ್ ನಿಲ್ದಾಣಗಳ ನಡುವೆ ಎರಡು ಟ್ರಿಪ್ ಮತ್ತು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ – ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ ಎಂದು ನೈರುತ್ಯ ರೈಲ್ವೆಯು ತಿಳಿಸಿದೆ.


ಬೆಂಗಳೂರು – ಚೆನ್ನೈ ವಿಶೇಷ ಎಕ್ಸ್ ಪ್ರೆಸ್

ರೈಲುಗಾಡಿಯ ಸಂಖ್ಯೆ 06209 ಅಕ್ಟೋಬರ್ 30 ಮತ್ತು ನವೆಂಬರ್ 3 ರಂದು ಬೆಳಿಗ್ಗೆ 8:05 ಕ್ಕೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು, ಅದೇ ದಿನ ಮಧ್ಯಾಹ್ನ 2:30 ಕ್ಕೆ ಚೆನ್ನೈ ಎಗ್ಮೋರ್ ನಿಲ್ದಾಣವನ್ನು ತಲುಪಲಿದೆ.
ಚೆನ್ನೈನಿಂದ ವಾಪಸ್ಸಾಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 06210 ಚೆನ್ನೈ ಎಗ್ಮೋರ್ ನಿಲ್ದಾಣದಿಂದ ಅಕ್ಟೋಬರ್ 30 ಮತ್ತು ನವೆಂಬರ್ 3, 2024 ರಂದು ಮಧ್ಯಾಹ್ನ 3:55 ಕ್ಕೆ ಹೊರಟು, ಅದೇ ದಿನ ರಾತ್ರಿ 10:50 ಕ್ಕೆ ಕೆಎಸ್ಆರ್ ಬೆಂಗಳೂರು ಆಗಮಿಸಲಿದೆ.


ಮಾರ್ಗ
ಈ ರೈಲು ಎರಡೂ ದಿಕ್ಕುಗಳಲ್ಲಿ ಯಶವಂತಪುರ, ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ ಪೆಟ್ಟೈ, ಕಟ್ಪಾಡಿ, ಅರಕ್ಕೋಣಂ ಮತ್ತು ಪೆರಂಬೂರು ನಿಲ್ದಾಣಗಳಲ್ಲಿ ನಿಲುಗಡೆ ಇರಲಿವೆ. ಈ ರೈಲು 1 ಎಸಿ ಟು ಟೈಯರ್, 1 ಎಸಿ ತ್ರಿ ಟೈಯರ್, 11 ಸ್ಲೀಪರ್ ಕ್ಲಾಸ್, 4 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್ / ಬ್ರೇಕ್ ವ್ಯಾನ್ ಸೇರಿದಂತೆ 19 ಬೋಗಿಗಳನ್ನು ಒಳಗೊಂಡಿರುತ್ತದೆ.


ಹುಬ್ಬಳ್ಳಿ ಮಂಗಳೂರು ವಿಶೇಷ ರೈಲು

ನವೆಂಬರ್ 2 ರಂದು ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಹಾಗು ನವೆಂಬರ್ 3 ರಂದು ಮಂಗಳೂರಿನಿಂದ ಬೆಂಗಳೂರು ಮಾರ್ಗವಾಗಿ ಹುಬ್ಬಳ್ಳಿಗೆ ವಿಶೇಷ ರೈಲು ಸಂಚಾರ ನಡೆಸಲಿದೆ.
ನವೆಂಬರ್ 2 ರಂದು ರೈಲು ಸಂಖ್ಯೆ 07311 ಹುಬ್ಬಳ್ಳಿ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ಪ್ರೆಸ್ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ರೈಲು ನಿಲ್ದಾಣದಿಂದ ಸಂಜೆ 4 ಗಂಟೆಗೆ ಹೊರಟು ಅದೇ ದಿನ ರಾತ್ರಿ 11.25ಕ್ಕೆ ಬೆಂಗಳೂರಿನ ಯಶವಂತಪುರ ಜಂಕ್ಷನ್ ರೈಲು ನಿಲ್ದಾಣ ತಲುಪಲಿದ್ದು, ಯಶವಂತಪುರ ರೈಲು ನಿಲ್ದಾಣದಿಂದ ರಾತ್ರಿ 11.55ಕ್ಕೆ ಹೊರಟು ನವೆಂಬರ್ 3ರಂದು ಬೆಳಗ್ಗೆ 11.45ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.

ನವೆಂಬರ್ 3 ರಂದು ರೈಲು ಸಂಖ್ಯೆ 07312 ಮಂಗಳೂರು ಜಂಕ್ಷನ್-ಹುಬ್ಬಳ್ಳಿ ವಿಶೇಷ ಎಕ್ಸ್ಪ್ರೆಸ್ ರೈಲು ಮಂಗಳೂರು ಜಂಕ್ಷನ್ನಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ರಾತ್ರಿ 10 ಗಂಟೆಗೆ ಯಶವಂತಪುರ ಜಂಕ್ಷನ್ ತಲುಪಿ ಬಳಿಕ ರಾತ್ರಿ 10.30ಕ್ಕೆ ಹೊರಟು ಮರುದಿನ ಅಂದರೆ ನವೆಂಬರ್ 4ರಂದು ಬೆಳಗ್ಗೆ 7 ಗಂಟೆಗೆ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ತಲುಪಲಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.


ಮಾರ್ಗ
ಈ ರೈಲು ಎರಡೂ ದಿಕ್ಕುಗಳಲ್ಲಿ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟವಾಳ ನಿಲ್ದಾಣಗಳಲ್ಲಿ ನಿಲುಗಡೆ ಇರಲಿವೆ. ಈ ರೈಲಿನಲ್ಲಿ 1 ಎಸಿ ಟು ಟೈಯರ್, 2 ಫಸ್ಟ್ ಎಸಿ ಕಮ್ ಎಸಿ ತ್ರಿ ಟೈಯರ್, 3 ಎಸಿ ತ್ರಿ ಟೈಯರ್, 5 ಸ್ಲೀಪರ್ ಕ್ಲಾಸ್, 2 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್ / ಬ್ರೇಕ್ ವ್ಯಾನ್ ಬೋಗಿಗಳು ಸೇರಿದಂತೆ 15 ಬೋಗಿಗಳು ಇರಲಿವೆ.

More articles

Latest article