ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಡಾ. ಎಸ್‌. ಆರ್‌. ಗುಂಜಾಳ, ಗಾನಯೋಗಿ ಪಂಡಿತ ಪಂಚಾಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿಗೆ ಬೇಗಂ ಪರ್ವೀನ್ ಸುಲ್ತಾನ್ ಆಯ್ಕೆ

Most read

ಬೆಂಗಳೂರು:ಧಾರವಾಡ ಜಿಲ್ಲೆಯ ಡಾ. ಎಸ್‌. ಆರ್‌. ಗುಂಜಾಳ ಅವರು  2024-25 ನೇ ಸಾಲಿನ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಕನ್ನಡ ಮತತ್ತು ಸಂಸ್ಕೃತಿ ಸಚಿವ  ಶಿವರಾಜ್ ತಂಗಡಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ ಮಾಡಿದ್ದಾರೆ.

ಪ್ರಶಸ್ತಿ ಪುರಸ್ಕೃತರ ಪಟ್ಟಿ ಹೀಗಿದೆ:

ಬಸವ ರಾಷ್ಟ್ರೀಯ ಪುರಸ್ಕಾರ – ಡಾ. ಎಸ್‌. ಆರ್‌. ಗುಂಜಾಳ ಧಾರವಾಡ.
ಶ್ರೀ ಭಗವಾನ್ ಮಹಾವೀರ ರಾಷ್ಟ್ರೀಯ ಶಾಂತಿ ಪ್ರಶಸ್ತಿ – ಪಂಡಿತರತ್ನ ಎ.ಶಾಂತಿರಾಜ., ಶಾಸ್ತ್ರೀ ಟ್ರಸ್ಟ್ ಬೆಂಗಳೂರು
ಟಿ ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿ – ಬಸಪ್ಪ ಎಚ್ ಭಜಂತ್ರಿ ಬಾಗಲಕೋಟ
ಗಾನಯೋಗಿ ಪಂಡಿತ ಪಂಚಾಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ – ಬೇಗಂ ಪರ್ವೀನ್ ಸುಲ್ತಾನ್ ಮುಂಬಯಿ
ಸಂಗೊಳ್ಳಿ ರಾಯಣ್ಣ ಪ್ರಶಸ್ತಿ – ಕೆ ರಾಜಕುಮಾರ ಕೋಲಾರ
ಅಕ್ಕಮಹಾದೇವಿ ಪ್ರಶಸ್ತಿ – ಡಾ ಹೇಮಾ ಪಟ್ಟಣಶೆಟ್ಟಿ ಧಾರವಾಡ
ಪಂಪ ಪ್ರಶಸ್ತಿ – ಡಾ ಬಿ ಎ ವಿವೇಕ ರೈ ದಕ್ಷಿಣ ಕನ್ನಡ
ಪ್ರೋ. ಕೆ. ಜಿ. ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ – ಸ.ರಘುನಾಥ್, ಕೋಲಾರ
ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ – ಡಾ. ವೈ. ಸಿ. ಭಾನುಮತಿ, ಹಾಸನ
ಬಿ.ವಿ. ಕಾರಂತ ಪ್ರಶಸ್ತಿ – ಜೆ. ಲೋಕೇಶ್, ಬೆಂಗಳೂರು
ಡಾ. ಗುಬ್ಬಿ ವೀರಣ್ಣ ಪ್ರಶಸ್ತಿ – ಕೆ. ನಾಗರತ್ನಮ್ಮ, ಮರಿಯಮ್ಮನಹಳ್ಳಿ ವಿಜಯನಗರ
ಡಾ.ಸಿದ್ಧಲಿಂಗಯ್ಯ ಸಾಹಿತ್ಯ ಪ್ರಶಸ್ತಿ – ಡಾ.ಎಲ್ ಹನುಮಂತಯ್ಯ ಬೆಂಗಳೂರು
ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ – ಎಂ ಜೆ ಕಮಲಾಕ್ಷಿ, ಬೆಂಗಳೂರು
ಜಕಣಾಚಾರಿ ಪ್ರಶಸ್ತಿ – ಎಂ. ರಾಮಮೂರ್ತಿ, ಬೆಂಗಳೂರು
ಜಾನಪದ ಶ್ರೀ ಪ್ರಶಸ್ತಿ – ನಿಂಗಪ್ಪ ಭಜಂತ್ರಿ ಕಲ್ಬುರ್ಗಿ ಮತ್ತು ದೊಡ್ಡಗವಿಬಸಪ್ಪ, ಚಾಮರಾಜನಗರ
ನಿಜಗುಣ ಪುರಂದರ ಪ್ರಶಸ್ತಿ – ಅನಂತ ತೆರದಾಳ, ಬೆಳಗಾವಿ ( ಹಿಂದುಸ್ತಾನಿ ಗಾಯನ )
ಕುಮಾರವ್ಯಾಸ ಪ್ರಶಸ್ತಿ – ಡಾ.ಎ ವಿ ಪ್ರಸನ್ನ, ಹಾಸನ ( ಗಮಕ ವ್ಯಾಖ್ಯಾನ)
ಶಾಂತಲಾ ನಾಟ್ಯ ಪ್ರಶಸ್ತಿ – ಪದ್ಮಿನಿ ರವಿ, ಬೆಂಗಳೂರು ( ಭರತನಾಟ್ಯ)
ಸಂತ ಶಿಶುನಾಳ ಷರೀಫ್ ಪ್ರಶಸ್ತಿ – ಪ್ರೋ. ಮಲ್ಲಣ್ಣ, ಚಾಮರಾಜನಗರ ( ಸುಗಮ ಸಂಗೀತ )

More articles

Latest article