ಶ್ರೀನಿವಾಸ್ ಪ್ರಸಾದ್ ಆರೋಗ್ಯ ಸ್ಥಿತಿ ಗಂಭೀರ : ಡಾ.ಸುದರ್ಶನ್‌ ಬಲ್ಲಾಳ್‌ ಮಾಹಿತಿ

Most read

ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ICU ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆಸ್ಪತ್ರೆಯ ವೈದ್ಯರಿಂದ ಮಾಹಿತಿ. ಏ.22ರಂದು ಶ್ರೀನಿವಾಸ್ ಪ್ರಸಾದ್ ಆಸ್ಪತ್ರೆಗೆ ದಾಖಲಾಗಿದ್ದರು. ಮಧುಮೇಹ ಇರುವುದರಿಂದ ತೀವ್ರ ನಿಗಾ ವಹಿಸುತ್ತಿದ್ದೇವೆ. ಶ್ರೀನಿವಾಸ್ ಪ್ರಸಾದ್ ಗೆ ಮೂತ್ರಪಿಂಡಗಳ ಸಮಸ್ಯೆ ಇದ್ದು, ಚಿಕಿತ್ಸೆಗೆ ಹೇಗೆ ಸ್ಪಂದಿಸ್ತಾರೆ ಅಂತ ಕಾದು ನೋಡಬೇಕಿದೆ. ಪ್ರತಿ ಗಂಟೆಗೂ ಆರೋಗ್ಯದಲ್ಲಿ ಬದಲಾವಣೆ ಆಗುತ್ತಿರುತ್ತದೆ – ಡಾ.ಬಲ್ಲಾಳ್.

ಮೈಯಲ್ಲಿ ನೀರು ತುಂಬಿದ್ದು, ಉಸಿರಾಟ ಸಮಸ್ಯೆ ಸಹ ಇದೆ. ಸೋಮವಾರ ಮತ್ತೆ ಆರೋಗ್ಯದ ಬಗ್ಗೆ ಮಾಹಿತಿ ನೀಡುತ್ತೇವೆ ಎಂದು ಆಸ್ಪತ್ರೆಯ ಚೇರ್ಮನ್ ಡಾ.ಸುದರ್ಶನ್ ಬಲ್ಲಾಳ್ ಮಾಹಿತಿ ನೀಡಿರುತ್ತಾರೆ.

More articles

Latest article