Sunday, September 8, 2024

ವಿದ್ಯಾರ್ಥಿನಿ ಪ್ರಭುದ್ದ ಕೊಲೆ ಪ್ರಕರಣ : ಓರ್ವ ಅಪ್ರಾಪ್ತ ಬಂಧನ!

Most read

ಇತ್ತೀಚೆಗೆ ಅನುಮಾನಾಸ್ಪದವಾಗಿ ಮೃತಪಟ್ಟ ವಿದ್ಯಾರ್ಥಿನಿ ಪ್ರಭುದ್ಯಾ ಸಾವಿನ ಸಂಬಂಧ ಸುಬ್ರಮಣ್ಯಪುರ ಠಾಣೆ ಪೊಲೀಸರು ಅಪ್ರಾಪ್ತನನ್ನು ಬಂಧಿಸಿದ್ದಾರೆ. ನಿನ್ನೆಯಷ್ಟೇ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದರು.

ಸುಬ್ರಮಣ್ಯ ಪುರದ ಬೃಂದಾವನ ಲೇಔಟ್‌ ನಿವಾಸಿ ಪ್ರಭುದ್ಯಾ (20)ಳ ಮೃತದೇಹ ಮೇ 15ರ ಸಂಜೆ ಮನೆಯ ಸ್ನಾನದಗೃಹದಲ್ಲಿ ಕತ್ತು ಮತ್ತು ಕೈ ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆರಂಭದಲ್ಲಿ ಪೊಲೀಸರು, ಅನುಮಾನಸ್ಪದ ಸಾವು ಎಂದು ಪ್ರಕರಣ ದಾಖಲಿಸಿದ್ದರು. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಕೊಲೆಯ ಶಂಕೆ ಇರುವುದರಿಂದ ಕೊಲೆ ಪ್ರಕರಣ ದಾಖಲಿಸಿಕೊಂಡು ವಿಚಾರಣೆಯನ್ನು ಚುರುಕುಗೊಂಡಿತ್ತು.

ಅತ್ಯೆಯಾದ ಪ್ರಭುದ್ದ ಮನೆಯ ಬಳಿ ಅಪ್ರಾಪ್ತನೊಬ್ಬ ಸಿಸಿಟಿವಿ ಪರಿಶೀಲನೆಯಲ್ಲಿ ಓಡಾಟ ಪತ್ತೆಯಾಗಿದ್ದು, ಆತನನ್ನು ವಿಚಾರಣೆ ನಡೆಸಿದಾಗ ಕೊಲೆ ವಿಚಾರ ಬಯಲಿಗೆ ಬಂದಿದೆ ಎಂದು ತಿಳಿದುಬಂದಿದೆ.

More articles

Latest article