ಪಾಕಿಸ್ತಾನ ಹೇಳಿಕೆ ನೀಡಿದ ಕರ್ನಾಟಕ ಹೈಕೋರ್ಟ್‌ ಜಡ್ಜ್‌: ತರಾಟೆಗೆ ತೆಗೆದುಕೊಂಡ ಸುಪ್ರೀಂ, ವರದಿ ನೀಡಲು ಸೂಚನೆ

Most read

ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರು ಪ್ರಕರಣವೊಂದರ ವಿಚಾರಣೆ ವೇಳೆ ಬೆಂಗಳೂರಿನ ಗೋರಿಪಾಳ್ಯವನ್ನು ‘ಪಾಕಿಸ್ತಾನ’ಕ್ಕೆ ಹೋಲಿಸಿದ್ದಾರೆ ಎಂಬ ಆರೋಪದ ಸಂಬಂಧ ಸುಪ್ರೀಂಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿದೆ. ಸುಪ್ರೀಂಕೋರ್ಟ್ ನ್ಯಾಯಪೀಠ ಸದ್ಯ ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್​​​ರಿಂದ ವರದಿ ಕೇಳಿದೆ.

ಕರ್ನಾಟಕ ಹೈಕೋರ್ಟ್ ನ್ಯಾಯಶಧೀಶರ ಹೇಳಿಕೆ ಕುರಿತ ವಿಚಾರಣೆಯನ್ನು ಸುಪ್ರೀಂ ಕೋರ್ಟ್​ ಸದ್ಯ ಎರಡು ವಾರ ಕಾಲ ಮುಂದೂಡಿಕೆ ಮಾಡಿದೆ. ಈ ಕುರಿತು ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್​​​ರಿಂದ ವರದಿ ಕೇಳಿದೆ. ಇದಲ್ಲದೇ ಅಟಾರ್ನಿ ಜನರಲ್ ಹಾಗೂ ಸಾಲಿಸಿಟರ್ ಜನರಲ್ ಅಭಿಪ್ರಾಯ ಕೇಳಿದೆ.

ಕರ್ನಾಟಕ ಹೈಕೋರ್ಟ್​​ ನ್ಯಾಯಾಧೀಶ ವಿ ಶ್ರೀಶಾನಂದ ಅವರು ವಿಚಾರಣೆಯೊಂದರ ವೇಳೆ ಮೈಸೂರು ರಸ್ತೆ ಮೇಲ್ಸೇತುವೆ ಬಳಿ ಹೋಗಿ ನೋಡಿ, ಪ್ರತಿ ಆಟೊ ರಿಕ್ಷಾದಲ್ಲಿ 10 ಮಂದಿ ಇರುತ್ತಾರೆ. ಅಲ್ಲಿ ಯಾವುದೂ ಅನ್ವಯವಾಗುವುದಿಲ್ಲ. ಯಾಕೆಂದರೆ ಕೆಆರ್​​ ಮಾರುಕಟ್ಟೆ ಮತ್ತು ಗೋರಿಪಾಳ್ಯವರೆಗೆ ಮೈಸೂರು ರೋಡ್ ಫ್ಲೈಓವರ್ ಪಾಕಿಸ್ತಾನದಲ್ಲಿದೆ, ಭಾರತದಲ್ಲಿಲ್ಲ. ಇದು ವಾಸ್ತವ ಎಂದು ಹೇಳಿದ್ದರು. ಈ ಹೇಳಿಕೆ ಕುರಿತ ವಿಡಿಯೋ ತುಣುಕೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.

More articles

Latest article