ಟೆಕಿ ಅತುಲ್ ಆತ್ಮಹತ್ಯೆ ಪ್ರಕರಣ; ಟ್ರೆಂಡ್ ಆದ #BengaluruSuicideCase ಟ್ಯಾಗ್

ಬೆಂಗಳೂರು: ದೇಶದ ಐಟಿಬಿಟಿ ರಾಜಧಾನಿ ಬೆಂಗಳೂರಿನಲ್ಲಿ ಟೆಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ದೇಶ ಮಾತ್ರವಲ್ಲದೆ ವಿಶ್ವದಾದ್ಯಂತ ಚರ್ಚೆಗೆ ಗ್ರಾಸವೊದಗಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ #JusticeForAtulSubhash ಮತ್ತು #BengaluruSuicideCase ಟ್ರೆಂಡ್ ಪ್ರಸಿದ್ದಿ ಪಡೆದಿವೆ. ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲೂ ಅತುಲ್ ಪರವಾಗಿ ನ್ಯಾಯಕ್ಕಾಗಿ ಬೇಡಿಕೆ ಹೆಚ್ಚಿದೆ. ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ. ಭಾರತದಲ್ಲಿ ನ್ಯಾಯ ವ್ಯವಸ್ಥೆ ಹದಗೆಟ್ಟಿದ್ದು, ನ್ಯಾಯಾಂಗ ವ್ಯವಸ್ಥೆ ಸಂಪೂರ್ಣವಾಗಿ ಬದಲಾಗಬೇಕಿದೆ ಎಂದು ಒಬ್ಬರು ಅಭಿಪ್ರಾಯಪಟ್ಟಿದ್ದರೆ ಇನ್ನೂ ಕೆಲವರು ಲಿಂಗ ಸಮಾನತೆಗಾಗಿ ಬೇಡಿಕೆ ಇರಿಸಿದ್ದಾರೆ.

ಅತುಲ್ ಸುಭಾಷ್ ಅವರ ಪತ್ನಿಯನ್ನು ಉದ್ಯೋಗದಿಂದಲೂ ತೆಗೆದು ಹಾಕುವಂತೆಯೂ ಬೇಡಿಕೆ ಹೆಚ್ಚುತ್ತಿದೆ. ಈ ಮಧ್ಯೆ ಖಾಸಗಿ ಕಂಪನಿಯ ನಿರ್ದೇಶಕ, ಉತ್ತರ ಪ್ರದೇಶದ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣವನ್ನು ಭೇದಿಸಲು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಅವರ ಸಹೋದರ ಬಿಕಾಸ್ ಕುಮಾರ್ ನೀಡಿದ ದೂರು ಆಧರಿಸಿ ಅತುಲ್ ಸುಭಾಷ್ ಅವರ ಪತ್ನಿ, ಆಕೆಯ ತಾಯಿ, ಸಹೋದರ ಹಾಗೂ ಚಿಕ್ಕಪ್ಪನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಆತ್ಮಹತ್ಯೆಗೂ ಮುನ್ನ ಅತುಲ್ ಸುಭಾಷ್ ಮಾಡಿದ್ದ 90 ನಿಮಿಷಗಳ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಭಾರತದಲ್ಲಿ ನರಮೇಧ ನಡೆಯುತ್ತಿದೆ. ಜನರನ್ನು ರಕ್ಷಿಸಿ ವಾಕ್ ಸ್ವಾತಂತ್ರ್ಯ ಮರುಸ್ಥಾಪಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಟೆಸ್ಲಾ ಕಂಪನಿ ಸಿಇಒ ಇಲಾನ್ ಮಸ್ಟ್ ಅವರ ನೆರವನ್ನು ಕೇಳಿದ್ದಾರೆ. ಬೆಂಗಳೂರಿನ ಪೊಲೀಸರು ಉತ್ತರಪ್ರದೇಶಕ್ಕೆ ತೆರಳಿದ್ದು ಅತುಲ್ ಪತ್ನಿ ಮತ್ತಿತರರನ್ನು ಬಂಧಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

ಬೆಂಗಳೂರು: ದೇಶದ ಐಟಿಬಿಟಿ ರಾಜಧಾನಿ ಬೆಂಗಳೂರಿನಲ್ಲಿ ಟೆಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ದೇಶ ಮಾತ್ರವಲ್ಲದೆ ವಿಶ್ವದಾದ್ಯಂತ ಚರ್ಚೆಗೆ ಗ್ರಾಸವೊದಗಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ #JusticeForAtulSubhash ಮತ್ತು #BengaluruSuicideCase ಟ್ರೆಂಡ್ ಪ್ರಸಿದ್ದಿ ಪಡೆದಿವೆ. ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲೂ ಅತುಲ್ ಪರವಾಗಿ ನ್ಯಾಯಕ್ಕಾಗಿ ಬೇಡಿಕೆ ಹೆಚ್ಚಿದೆ. ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ. ಭಾರತದಲ್ಲಿ ನ್ಯಾಯ ವ್ಯವಸ್ಥೆ ಹದಗೆಟ್ಟಿದ್ದು, ನ್ಯಾಯಾಂಗ ವ್ಯವಸ್ಥೆ ಸಂಪೂರ್ಣವಾಗಿ ಬದಲಾಗಬೇಕಿದೆ ಎಂದು ಒಬ್ಬರು ಅಭಿಪ್ರಾಯಪಟ್ಟಿದ್ದರೆ ಇನ್ನೂ ಕೆಲವರು ಲಿಂಗ ಸಮಾನತೆಗಾಗಿ ಬೇಡಿಕೆ ಇರಿಸಿದ್ದಾರೆ.

ಅತುಲ್ ಸುಭಾಷ್ ಅವರ ಪತ್ನಿಯನ್ನು ಉದ್ಯೋಗದಿಂದಲೂ ತೆಗೆದು ಹಾಕುವಂತೆಯೂ ಬೇಡಿಕೆ ಹೆಚ್ಚುತ್ತಿದೆ. ಈ ಮಧ್ಯೆ ಖಾಸಗಿ ಕಂಪನಿಯ ನಿರ್ದೇಶಕ, ಉತ್ತರ ಪ್ರದೇಶದ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣವನ್ನು ಭೇದಿಸಲು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಅವರ ಸಹೋದರ ಬಿಕಾಸ್ ಕುಮಾರ್ ನೀಡಿದ ದೂರು ಆಧರಿಸಿ ಅತುಲ್ ಸುಭಾಷ್ ಅವರ ಪತ್ನಿ, ಆಕೆಯ ತಾಯಿ, ಸಹೋದರ ಹಾಗೂ ಚಿಕ್ಕಪ್ಪನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಆತ್ಮಹತ್ಯೆಗೂ ಮುನ್ನ ಅತುಲ್ ಸುಭಾಷ್ ಮಾಡಿದ್ದ 90 ನಿಮಿಷಗಳ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಭಾರತದಲ್ಲಿ ನರಮೇಧ ನಡೆಯುತ್ತಿದೆ. ಜನರನ್ನು ರಕ್ಷಿಸಿ ವಾಕ್ ಸ್ವಾತಂತ್ರ್ಯ ಮರುಸ್ಥಾಪಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಟೆಸ್ಲಾ ಕಂಪನಿ ಸಿಇಒ ಇಲಾನ್ ಮಸ್ಟ್ ಅವರ ನೆರವನ್ನು ಕೇಳಿದ್ದಾರೆ. ಬೆಂಗಳೂರಿನ ಪೊಲೀಸರು ಉತ್ತರಪ್ರದೇಶಕ್ಕೆ ತೆರಳಿದ್ದು ಅತುಲ್ ಪತ್ನಿ ಮತ್ತಿತರರನ್ನು ಬಂಧಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

More articles

Latest article

Most read