ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಟೆಕ್ಕಿ ದಂಪತಿ

ಬೆಂಗಳೂರು: ಸದಾಶಿವನಗರದ ಆರ್​ಎಂವಿ ಎರಡನೇ ಹಂತದ  ಟೆಂಪಲ್ ರಸ್ತೆಯಲ್ಲಿ ವಾಸವಾಗಿದ್ದ ದಂಪತಿ ತಮ್ಮ ಇಬ್ಬರು ಮಕ್ಕಳನ್ನು ಕೊಂದು ನಂತರ ತಾವೂ ನೇಣಿಗೆ ಶರಣಾಗಿದ್ದಾರೆ. ಅನೂಪ್ ಕುಮಾರ್ (38), ಪತ್ನಿ ರಾಖಿ (35) ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ. ಇವರ ಐದು ವರ್ಷದ ವಿಶೇಷ ಚೇತನ ಹೆಣ್ಣು ಮಗು ಮತ್ತು ಎರಡು ವರ್ಷದ ಗಂಡು ಮಗುವಿಗೆ ವಿಷ ಕುಡಿಸಿ,  ನಂತರ ತಾವು ನೇಣಿಗೆ ಶರಣಾಗಿದ್ದಾರೆ. ಇಬ್ಬರೂ ಟೆಕ್ಕಿಗಳಾಗಿದ್ದು ವರ್ಕ್ ಫ್ರಂ ಹೋಮ್ ಮಾಡುತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಾಲಬಾಧೆ ತಾಳಲಾರದೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಉ ಪೊಲೀಸರು ಶಂಕಿಸಿದ್ದಾರೆ. ಸದಾಶಿವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.  ಪ್ರಕರಣ ಕುರಿತು ಮೃತರು ಮೂಲತಃ ಉತ್ತರಪ್ರದೇಶದ ಅಲಹಾಬಾದ್​ನವರು ಎಂದು ತಿಳಿದುಬಂದಿದೆ. ಕಳೆದ ಎರಡು ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮೃತ ಅನೂಪ್ ಕುಮಾರ್ ಖಾಸಗಿ ಕಂಪನಿಯಲ್ಲಿ ಸಾಫ್ಟ್​​ವೇರ್ ಕನ್ಸಲ್ಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಮೃತರ ಕುಟುಂಬದವರಿಗೆ ಮಾಹಿತಿ ನೀಡಲಾಗಿದೆ. ಸಂಜೆ ವೇಳೆಗೆ ಮೃತರ ಕುಟುಂಬದವರು ಬೆಂಗಳೂರಿಗೆ ಬರುವ ಸಾಧ್ಯತೆ ಇದೆ. ಘಟನೆ ಸಂಬಂಧ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಎಫ್.ಎಸ್.ಎಲ್ ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ಕಾರಣವನ್ನು  ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಸದಾಶಿವನಗರದ ಆರ್​ಎಂವಿ ಎರಡನೇ ಹಂತದ  ಟೆಂಪಲ್ ರಸ್ತೆಯಲ್ಲಿ ವಾಸವಾಗಿದ್ದ ದಂಪತಿ ತಮ್ಮ ಇಬ್ಬರು ಮಕ್ಕಳನ್ನು ಕೊಂದು ನಂತರ ತಾವೂ ನೇಣಿಗೆ ಶರಣಾಗಿದ್ದಾರೆ. ಅನೂಪ್ ಕುಮಾರ್ (38), ಪತ್ನಿ ರಾಖಿ (35) ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ. ಇವರ ಐದು ವರ್ಷದ ವಿಶೇಷ ಚೇತನ ಹೆಣ್ಣು ಮಗು ಮತ್ತು ಎರಡು ವರ್ಷದ ಗಂಡು ಮಗುವಿಗೆ ವಿಷ ಕುಡಿಸಿ,  ನಂತರ ತಾವು ನೇಣಿಗೆ ಶರಣಾಗಿದ್ದಾರೆ. ಇಬ್ಬರೂ ಟೆಕ್ಕಿಗಳಾಗಿದ್ದು ವರ್ಕ್ ಫ್ರಂ ಹೋಮ್ ಮಾಡುತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಾಲಬಾಧೆ ತಾಳಲಾರದೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಉ ಪೊಲೀಸರು ಶಂಕಿಸಿದ್ದಾರೆ. ಸದಾಶಿವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.  ಪ್ರಕರಣ ಕುರಿತು ಮೃತರು ಮೂಲತಃ ಉತ್ತರಪ್ರದೇಶದ ಅಲಹಾಬಾದ್​ನವರು ಎಂದು ತಿಳಿದುಬಂದಿದೆ. ಕಳೆದ ಎರಡು ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮೃತ ಅನೂಪ್ ಕುಮಾರ್ ಖಾಸಗಿ ಕಂಪನಿಯಲ್ಲಿ ಸಾಫ್ಟ್​​ವೇರ್ ಕನ್ಸಲ್ಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಮೃತರ ಕುಟುಂಬದವರಿಗೆ ಮಾಹಿತಿ ನೀಡಲಾಗಿದೆ. ಸಂಜೆ ವೇಳೆಗೆ ಮೃತರ ಕುಟುಂಬದವರು ಬೆಂಗಳೂರಿಗೆ ಬರುವ ಸಾಧ್ಯತೆ ಇದೆ. ಘಟನೆ ಸಂಬಂಧ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಎಫ್.ಎಸ್.ಎಲ್ ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ಕಾರಣವನ್ನು  ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

More articles

Latest article

Most read