ಥಗ್ ಲೈಫ್‌ ಚಿತ್ರ ಬಿಡುಗಡೆಗೆ ತಡೆಯೊಡ್ಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಕರ್ನಾಟಕಕ್ಕೆ ಸುಪ್ರೀಂಕೋರ್ಟ್‌ ಸೂಚನೆ

Most read

ನವದೆಹಲಿ: ಕಮಲ್‌ ಹಾಸನ್ ನಟನೆಯ ‘ಥಗ್‌ ಲೈಫ್‌’ ಸಿನಿಮಾ ಪ್ರದರ್ಶನಕ್ಕೆ ಕರ್ನಾಟಕದಲ್ಲಿ ನಿರ್ಬಂಧ ಹೇರಿರುವ ಪ್ರಕರಣವನ್ನು ಸುಪ್ರೀಂಕೋರ್ಟ್‌ ಗಂಭೀರವಾಗಿ ಪರಿಗಣಿಸಿದೆ.

ಇಂದು ಈ ಪ್ರಕರಣದ ವಿಚಾರಣೆ ನಡೆಸಿದ  ನ್ಯಾ. ಉಜ್ಜಲ್ ಭುಯಾನ್‌ ಮತ್ತು ನ್ಯಾ. ಮನಮೋಹನ್ ಅವರ ದ್ವಿಸದಸ್ಯ ಪೀಠವು, ಸಿನಿಮಾಗೆ ತಡೆಯೊಡ್ಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ. ಯಾರದ್ದೋ ಭಾವನೆಗೆಳಿಗೆ ಧಕ್ಕೆಯಾಗುತ್ತದೆ ಎಂದು ಸಿನಿಮಾ, ಸ್ಟ್ಯಾಂಡ್‌ ಅಪ್‌ ಕಾಮಿಡಿ ಅಥವಾ ಕವನ ವಾಚನಗಳಿಗೆ ತಡೆ ನೀಡಲಾಗುತ್ತದೆಯೇ ಎಂದು ಸುಪ್ರೀಂ ಕೋರ್ಟ್‌ ಪ್ರಶ್ನಿಸಿದೆ.

ಭಾರತದಲ್ಲಿ ಭಾವನೆಗಳಿಗೆ ಧಕ್ಕೆ ಉಂಟಾಗುವ ಪ್ರಸಂಗಗಳಿಗೆ ಕೊನೆ ಎಲ್ಲಿದೆ? ಹಾಸ್ಯ ಕಲಾವಿದರು ಏನಾದರೂ ಹೇಳಿದರೆ ಕೆಲವರ ಭಾವನೆಗಳಿಗೆ ಧಕ್ಕೆಯುಂಟಾಗಿ ಪ್ರತಿಭಟನೆ ನಡೆಸಿ ವಿಧ್ವಂಸಕತೆ ಮೆರೆಯುತ್ತಾರೆ. ಹೀಗಾದರೆ ನಾವು ಎತ್ತ ಸಾಗುತ್ತಿದ್ದೇವೆ? ಒಂದು ಪ್ರತಿಭಟನೆಗಾಗಿ ಸಿನಿಮಾ ಪ್ರದರ್ಶನ ನಿಲ್ಲಿಸಬೇಕೇ ಅಥವಾ ಸ್ಟ್ಯಾಂಡ್‌ ಅಪ್ ಕಾಮಿಡಿಗೆ ತಡೆ ನೀಡಬೇಕೇ ಅಥವಾ ಕವನ ವಾಚನಕ್ಕೆ ತೆರೆ ಎಳೆಯಬೇಕೇ’ ಎಂದು ಸರಣಿ ಪ್ರಶ್ನೆಗಳನ್ನು ಕೇಳಿದೆ.

ಪ್ರಕರಣ ಕುರಿತು ಕರ್ನಾಟಕ ರಾಜ್ಯ ಸರ್ಕಾರ ಅಫಿಡವಿಟ್ ಸಲ್ಲಿಸಿದೆ. ಸಿನಿಮಾ ಬಿಡುಗಡೆಗೆ ದಾರಿ ಮಾಡಿಕೊಟ್ಟಿದೆ. ಸಿನಿಮಾ ಬಿಡುಗಡೆಗೆ ತಡೆಯೊಡ್ಡಲು ಪ್ರತಿಭಟನೆ ನಡೆಸಿ ಅಶಾಂತಿ ಸೃಷ್ಟಿಸಿದಲ್ಲಿ ಅಂಥ ವ್ಯಕ್ತಿ ಅಥವಾ ಗುಂಪಿನ ವಿರುದ್ಧ ರಾಜ್ಯಸರ್ಕಾರ ಕ್ರಿಮಿನಲ್ ಹಾಗೂ ಸಿವಿಲ್‌ ಕಾನೂನಡಿ ಕಠಿಣ ಕ್ರಮ ಜರುಗಿಸಬೇಕು ಎಂದು ನ್ಯಾಯಾಲಯ ತಾಕೀತು ಮಾಡಿದೆ.

ಕನ್ನ ತಮಿಳಿನಿಂದ ಹುಟ್ಟಿದೆ ಎಂಬ ಕೇಳಿಕೆ ನೀಡಿದ್ದಕ್ಕೆ ಕ್ಷಮೆ ಕೇಳುವಂತೆ ಹಿರಿಯ ನಟ ಕಮಲ್ ಹಾಸನ್ ಅವರನ್ನು ಆಗ್ರಹಿಸಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕ್ರಮವನ್ನೂ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ

ಮಂಡಳಿ ಪರ ವಕೀಲರು ಕಮಲ್‌ ಗೆ ಮಂಡಳಿಯು ಯಾವುದೇ ಬೆದರಿಕೆ ಒಡ್ಡಿಲ್ಲ. ಆದರೆ ಹೇಳಿಕೆ ಕುರಿತು ವ್ಯಾಪಕ ಪ್ರತಿಭಟನೆ ನಡೆದಿತ್ತು. ಮಂಡಳಿಯ ಕಚೇರಿಯನ್ನು ನುಗ್ಗಿದ ಗುಂಪು ಬೆದರಿಸಿದ ಬೆನ್ನಲ್ಲೇ ಕ್ಷಮೆ ಕೋರಿ ಎಂದು ಪತ್ರ ಬರೆಯಲಾಗಿತ್ತು ಎಂದು  ತಿಳಿಸಿದರು. ಬೆದರಿಕೆ ಕುರಿತು ಮಂಡಳಿಯು ಪೊಲೀಸರಿಗೆ ದೂರು ನೀಡಿದೆಯೇ? ಮಂಡಳಿಯು ನಿಜವಾಗಿಯೂ ಜನರ ಒತ್ತಡಕ್ಕೆ ಮಣಿಯಿತೇ? ನೀವು ದೂರು ನೀಡದೆ, ಪ್ರತಿಭಟನಾಕಾರರ ಹಿಂದೆ ಅವಿತುಕೊಂಡಿದ್ದೀರಿ ಎಂದು ನ್ಯಾ. ಭುಯಾನ್ಅವರು ಮಂಡಳಿಯನ್ನು ತರಾಟೆಗೆ ತೆಗೆದುಕೊಂಡರು.

ನ್ಯಾಯಾಲಯ ಹೊರಡಿಸುವ ಯಾವುದೇ ಆದೇಶಕ್ಕೆ ಮಂಡಳಿ ಬದ್ಧ ಎಂದು ಮಂಡಳಿ ಪರ ವಕೀಲರು ಪೀಠಕ್ಕೆ ತಿಳಿಸಿದರು. ಕಮಲ್ಹಾಸನ್ ಅವರ ರಾಜ್ಕಮಲ್ ಫಿಲ್ಮ್ ಇಂಟರ್ನ್ಯಾನಷಲ್ಸಂಸ್ಥೆಯ ಪರ ವಕೀಲರು ವಾದಿಸಿ, ‘ಈಗಾಗಲೇ ರೂ.30 ಕೋಟಿ ನಷ್ಟ ಉಂಟಾಗಿದೆ. ಚಿತ್ರ ಪ್ರದರ್ಶನಕ್ಕೆ ಕರ್ನಾಟಕ ಸರ್ಕಾರ ರಕ್ಷಣೆ ನೀಡಿದಲ್ಲಿ ನಮಗೆ ಯಾವುದೇ ಅಭ್ಯಂತರವಿಲ್ಲ ಎಂದರು.

More articles

Latest article