ತುಕಾಲಿ ಸಂತೋಷ್ ಕಾರು ಅಪಘಾತ :ಆಟೋ ಚಾಲಕ ಸಾವು

Most read

ಕುಣಿಗಲ್:‌ ಬಿಗ್‌ ಬಾಸ್‌ ರಿಯಾಲಿಟಿ ಶೋ ನಲ್ಲಿ ಸ್ಪರ್ಧಿಯಾಗಿದ್ದ ತುಕಾಲಿ ಸಂತೋಷ್‌ ಕಾರು ಆಟೋ ಒಂದಕ್ಕೆ ಅಪ್ಪಳಿಸಿ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕ ದುರ್ಮರಣಕ್ಕೆ ಈಡಾಗಿದ್ದಾರೆ.

ಕುಣಿಗಲ್‌ ನಿಂದ ಕುರುಡಿಹಳ್ಳಿಗೆ ತೆರಳುತ್ತಿದ್ದ ಆಟೋಗೆ ಕುಣಿಗಲ್‌ ತಾಲ್ಲೂಕಿನ ಹೊನ್ನೇನಹಳ್ಳಿ ಬಳಿ ತುಕಾಲಿ ಸಂತೋಷ್‌ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಅಪಘಾತ ಸಂಭವಿಸಿತ್ತು. ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಜಗದೀಶನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಆತ ಅಸುನೀಗಿದ್ದಾನೆ.

ಇತ್ತೀಚೆಗಷ್ಟೆ ಹೊಸ ಕಿಯಾ ಕಾರು ಖರೀದಿಸಿದ್ದ ತುಕಾಲಿ ಸಂತೋಷ್‌ ಅದರ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.

ಹೊಳೆನರಸೀಪುರದವರಾದ ತುಕಾಲಿ ಸಂತೋಷ್‌, ತುಮಕೂರಿನಿಂದ ಹೊಳೆನರಸೀಪುರಕ್ಕೆ ತೆರಳುವಾಗ ಮಾರ್ಚ್‌ 13ರಂದು ಈ ದುರ್ಘಟನೆ ಸಂಭವಿಸಿತ್ತು. ಚಿಕಿತ್ಸೆ ಫಲಿಸದೆ ಜಗದೀಶ್
ಅವರು ಇಂದು (ಮಾರ್ಚ್ 14) ಮುಂಜಾನೆ ಮೃತಪಟ್ಟಿದ್ದಾರೆ. ಜಗದೀಶ್ ಅವರಿಗೆ 40 ವರ್ಷ ವಯಸ್ಸಾಗಿತ್ತು.

ಕಾಮಿಡಿ ರಿಯಾಲಿಟಿ ಶೋಗಳ ಮೂಲಕ ಗಮನ ಸೆಳೆದ ತುಕಾಲಿ ಸಂತೋಷ್‌ ಅವರು ಕಳೆದ ಬಿಗ್‌ ಬಾಸ್‌ ಸೀಜನ್ನಿನಲ್ಲಿ ಫಿನಾಲೆ ತಲುಪಿದ್ದರು.

ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

More articles

Latest article