ಇಂದು ಜವಾಹರಲಾಲ್ ನೆಹರೂ ಪುಣ್ಯ ತಿಥಿ: ಕಾಂಗ್ರೆಸ್ ನಾಯಕರ ಸ್ಮರಣೆ

Most read

ನವದೆಹಲಿ: ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಪುಣ್ಯ ತಿಥಿ ಅಂಗವಾಗಿ ಇಂದು ಕಾಂಗ್ರೆಸ್ ಶ್ರದ್ಧಾಂಜಲಿ ಸಲ್ಲಿಸಿದೆ. ಪಂಡಿತ್ ನೆಹರೂ ತಮ್ಮ ದೂರದೃಷ್ಟಿಯ ನಾಯಕತ್ವದಿಂದ ಸ್ವತಂತ್ರ ಭಾರತಕ್ಕೆ ಅಡಿಪಾಯ ಹಾಕಿದ್ದಾರೆ. ಸಾಮಾಜಿಕ ನ್ಯಾಯ, ಶಿಕ್ಷಣ, ಆಧುನಿಕತೆ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಸ್ಥಾಪನೆಯಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೆನಪಿಸಿಕೊಂಡಿದ್ದಾರೆ.

ದೆಹಲಿಯಲ್ಲಿರುವ ಶಾಂತಿವನದಲ್ಲಿರುವ ನೆಹರೂ ಅವರ ಸ್ಮಾರಕಕ್ಕೆ ಸೋನಿಯಾ ಗಾಂಧಿ ಪುಷ್ಪ ನಮನ ಸಲ್ಲಿಸಿ ಗೌರವ ಸಲ್ಲಿಸಿದರು.
ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಭಾರತವನ್ನು ಶೂನ್ಯದಿಂದ ಉತ್ತುಂಗಕ್ಕೆ ಕೊಂಡೊಯ್ದ ಆಧುನಿಕ ಭಾರತದ ಸೃಷ್ಟಿಕರ್ತ, ಪ್ರಜಾಪ್ರಭುತ್ವದ ನಿರ್ಭೀತ ರಕ್ಷಕ, ಭಾರತವನ್ನು ವೈಜ್ಞಾನಿಕ, ಆರ್ಥಿಕ, ಕೈಗಾರಿಕಾ ಮತ್ತು ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮಾಡಿದವರು ನೆಹರೂ ಅವರು. ದೇಶಕ್ಕೆ ‘ವೈವಿಧ್ಯತೆಯಲ್ಲಿ ಏಕತೆ’ ಎಂಬ ಸಂದೇಶವನ್ನು ನೀಡಿದ, ನಮ್ಮ ಸ್ಫೂರ್ತಿಯ ಮೂಲವಾದ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿಯಂದು ಅವರಿಗೆ ನಮನಗಳು. ನೆಹರೂ ಅವರ ಕೊಡುಗೆ ಇಲ್ಲದಿದ್ದರೆ 21ನೇ ಶತಮಾನವನ್ನು ಈ ರೀತಿಯಾಗಿ ಊಹಿಸಿಕೊಳ್ಳಲೂ ಸಾಧ್ಯವಿಲ್ಲ ಎಂದು ಸ್ಮರಿಸಿಕೊಂಡಿದ್ದಾರೆ.

ಪ್ರಿಯಾಂಕಾ ಗಾಂಧಿ ಅವರು ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರು ವಿಜ್ಞಾನ ಮತ್ತು ತಂತ್ರಜ್ಞಾನದ ಸಹಾಯದಿಂದ ಮುಂದುವರಿದ ಮತ್ತು ಆಧುನಿಕ ಜಗತ್ತಿನೊಂದಿಗೆ ಸ್ಪರ್ಧಿಸುವ ಭಾರತದ ಕನಸು ಕಂಡಿದ್ದರು. ಇದಕ್ಕಾಗಿ ಅವರು ಶೈಕ್ಷಣಿಕ, ವೈಜ್ಞಾನಿಕ, ಕೈಗಾರಿಕಾ, ತಾಂತ್ರಿಕ, ಸಾಮಾಜಿಕ ಮತ್ತು ಆರ್ಥಿಕ ಸಂಸ್ಥೆಗಳಿಗೆ ಅಡಿಪಾಯ ಹಾಕಿದರ. ಅವುಗಳೇ ಇಂದು ಭಾರತದ ಬೆನ್ನೆಲುಬಾಗಿವೆ. ಭಾರತವನ್ನು ಪ್ರಗತಿಯ ಆಧಾರಸ್ತಂಭವಾಗಿ ಬಲಪಡಿಸುತ್ತಿವೆ ಎಂದು ಹೇಳಿದ್ದಾರೆ.

More articles

Latest article