ತೋತಾಪುರಿ ಮಾವು ಮೇಲಿನ ಸಾಗಣೆ ರದ್ದುಗೊಳಿಸುವಂತೆ ಆಂಧ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

Most read

ಬೆಂಗಳೂರು: ಕರ್ನಾಟಕದಿಂದ ಚಿತ್ತೂರು ಜಿಲ್ಲೆಗೆ ತೋತಾಪುರಿ ಮಾವಿನ ಹಣ್ಣುಗಳ ಸಾಗಣೆ ಮೇಲಿನ ನಿಷೇಧವನ್ನು ವಾಪಸ್‌ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ.

 ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮುಖ್ಯಮಂತ್ರಿಗಳು ಪೂರ್ವ ಸಮಾಲೋಚನೆ ಅಥವಾ ಸಮನ್ವಯವಿಲ್ಲದೆ ತೆಗೆದುಕೊಳ್ಳಲಾದ ಇಂತಹ ಏಕಪಕ್ಷೀಯ ಕ್ರಮಗಳು ಸಹಕಾರಿ ಒಕ್ಕೂಟದ ಮನೋಭಾವಕ್ಕೆ ವಿರುದ್ಧವಾಗಿರುತ್ತವೆ. ಈ ಕ್ರಮವು ಪ್ರತೀಕಾರದ ಕ್ರಮಗಳಿಗೆ ಮತ್ತು ಸರಕುಗಳ ಅಂತರ ರಾಜ್ಯ ಸಾಗಣೆಗೆ ಅಡ್ಡಿಯಾಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಿಂದ ಚಿತ್ತೂರು ಜಿಲ್ಲೆಗೆ ತೋತಾಪುರಿ ಮಾವಿನ ಹಣ್ಣುಗಳ ಸಾಗಣೆ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳುವಂತೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಬರೆದಿದ್ದೇನೆ. ಈ ನಿಷೇಧವು ಸಾವಿರಾರು ರೈತರು ಮತ್ತು ವ್ಯಾಪಾರಿಗಳಿಗೆ ನೋವುಂಟು ಮಾಡುತ್ತದೆ. ನಮ್ಮ ಜನರ ಸಮೃದ್ಧಿಗೆ ರಾಜ್ಯಗಳ ನಡುವಿನ ಸಹಕಾರ ಅತ್ಯಗತ್ಯ ಎಂದು ಹೇಳಿದ್ದಾರೆ.

ಕರ್ನಾಟಕ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಜೂನ್ 10 ರಂದು ಆಂಧ್ರಪ್ರದೇಶದ ತಮ್ಮ ಮುಖ್ಯ ಕಾರ್ಯದರ್ಶಿ ಕೆ. ವಿಜಯಾನಂದ್ ಅವರಿಗೆ ಪತ್ರ ಬರೆದು ನಿಷೇಧವನ್ನು ರದ್ದುಗೊಳಿಸುವಂತೆ ಕೋರಿದ್ದರು.

More articles

Latest article