ಶಿವಮೊಗ್ಗ ಅಬ್ಬಿ ಜಲಪಾತದಲ್ಲಿ ಪೋಟೋ ತೆಗೆಯುವಾಗ ಯುವಕ ನೀರುಪಾಲು

Most read

ಪೋಟೋ ತೆಗೆಯಲು ಹೋದಾಗ ಕಾಲು ಜಾರಿ ಜಲಪಾತದಲ್ಲಿ ಯುವಕ ಸತ್ತಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಜಲಪಾತದ (Abbi Falls) ಬಳಿ ನಡೆದಿದೆ.

ಬಳ್ಳಾರಿ ಮೂಲದ ವಿನೋದ್ (26) ಮೃತ ಯುವಕ. ಬೆಂಗಳೂರಿನಿಂದ ಪ್ರವಾಸಕ್ಕೆಂದು 12 ಜನರ ತಂಡದೊಂದಿಗ ಅಬ್ಬಿ ಫಾಲ್ಸ್‌ಗೆ ತೆರಳಿದ್ದರು. ಈ ವೇಳೆ ಇದೇ ವೇಳೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಫಾಲ್ಸ್‌ ಬಳಿ ತೆರಳಿ ಯುವಕ ಪೋಟೋ ತೆಗೆದುಕೊಳ್ಳುತ್ತಿದ್ದಾಗ ಕಾಲು ಜಾರಿ ಬಿದ್ದು ನೀರು ಪಾಲಾಗಿದ್ದಾನೆ.

ಕಾಲು ಜಾರಿ ಬಿದ್ದು ವಿನೋದ್ ಮೃತದೇವ ನಾಪತ್ತೆಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ, ಮೃತ ದೇಹಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

More articles

Latest article