ಮಯೂರ ಬಾಲಭವನಕ್ಕೆ ಬರುವ ಪ್ರವಾಸಿಗರಿಂದ ಸ್ವಂತ ಖಾತೆಗೆ ಹಣ ವರ್ಗಾವಣೆ; ಅಧಿಕಾರಿಗಳನ್ನೇ ಕಿತ್ತೆಸೆದ ಸಚಿವ ಎಚ್.ಕೆ ಪಾಟೀಲ್

Most read

ಮಯೂರ ಬಾಲಭವನದಲ್ಲಿ ಹಣಕಾಸು ಅವ್ಯವಹಾರ ಆರೋಪ ಹಿನ್ನೆಲೆ ಇಬ್ಬರು ಸಿಬ್ಬಂದಿಯನ್ನು ಸೇವೆಯಿಂದ ವಜಾ ಮಾಡಿದರೆ, ಮತ್ತಿಬ್ಬರನ್ನು ಅಮಾನತುಗೊಳಿಸಲಾಗಿದೆ.

ವಾಸೋದ್ಯಮ ಇಲಾಖೆಯ ಮಯೂರ ಬಾಲ ಭವನಕ್ಕೆ ಬರುವ ಪ್ರವಾಸಿಗರಿಗೆ ಹಣ ಪಾವತಿಗೆ ಬಾಲ ಭವನ ಸಂಸ್ಥೆಯ ಕ್ಯೂ ಆರ್ ಕೋಡ್ ಕೊಡದೇ ನಾಲ್ವರು ಸಿಬ್ಂದಿಯೂ ತಮ್ಮ ವೈಯಕ್ತಿಕ ಬ್ಯಾಂಕ್ ಖಾತೆಯ ಕ್ಯೂ ಆರ್ ಕೋಡ್ ಕೊಟ್ಟಿದ್ದಾರೆ. ಪ್ರವಾಸಿಗರು ಸರ್ಕಾರದ ಸೇವೆಯನ್ನು ಬಳಸಿ ಹಣ ಪಾವತಿಸಿದರೆ ನೇರವಾಗಿ ಭ್ರಷ್ಟ ಅಧಿಕಾರಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಿದೆ. ಈ ಮೂಲಕ ಪ್ರವಾಸೋದ್ಯಮ ಇಲಾಖೆಯ ಸಂಸ್ಥೆಗೆ ಸೇರಬೇಕಿದ್ದ ಹಣವನ್ನು ಸಿಬ್ಬಂದಿ ತಮ್ಮ ಖಾತೆಗೆ ವರ್ಗಾಯಿಸಿಕೊಂಡು ಸರ್ಕಾರದ ಬೊಕ್ಕಸಕ್ಕೆ ನಷ್ಟವನ್ನುಂಟು ಮಾಡಿದ್ದಾರೆ. ಹಣ ದುರುಪಯೋಗದ ತಪ್ಪೊಪ್ಪಿಗೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಲ್ಲಿ ಹಣದ ಅವ್ಯವಹಾರ ಆಗಿರುವುದು ತಿಳಿಯುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಪ್ರವಾಸೋದ್ಯಮ ಸಚಿವ ಎಚ್.ಕೆ‌ ಪಾಟೀಲ್ ಅಧಿಕಾರಿಗಳನ್ನು ಅಮಾನತು ಮಾಡಿದರೆ, ಗುತ್ತಿಗೆ ಸಿಬ್ಬಂದಿಯನ್ನು ಸೇವೆಯಿಂದ ಕಿತ್ತೆಸೆದಿದ್ದಾರೆ. 

ದ್ವಿತೀಯ ದರ್ಜೆ ಸಹಾಯಕ ರಾಮಚಂದ್ರ ಕೆ ಹಾಗೂ ವಾಹನ ಚಾಲಕ ಅಬ್ದುಲ್ ವಾಜಿದ್ ಎಂಬಿಬ್ಬರನ್ನು ಸೇವೆಯಿಂದ ವಜಾಗೊಳಿಸಿದರೆ, ಸಹಾಯಕ ಉಗ್ರಾಣಿಕ ವೆಂಕಟೇಶ್ ಮತ್ತು ಸಹಾಯಕ ಪರೊಚಾರಿಕ ಕೋದಂಡರಾಮ ಎಂಬುವವರನ್ನು ಅಮಾನತುಗೊಳಿಸಲಾಗಿದೆ.

ಇದು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಡಿಯಲ್ಲಿ ನಡೆದಿರುವ ದುರುಪಯೋಗ ಆಗಿದ್ದು, ನಾಲ್ವರ ವಿರುದ್ದ ಎಫ್ಐಆರ್ ದಾಖಲಿಸಲು ಸಚಿವ ಎಚ್.ಕೆ ಪಾಟೀಲ್ ಸೂಚನೆ ನೀಡಿದ್ದಾರೆ.

ವೈಯಕ್ತಿಕ ಬ್ಯಾಂಕ್ ಖಾತೆ ಕ್ಯೂ ಆರ್ ಕೋಡ್ ಸ್ಕ್ಯಾನ್ ಮೂಲಕ ಅವ್ಯವಹಾರ:
ಕೆ.ರಾಮಚಂದ್ರ – ದ್ವಿತೀಯ ದರ್ಜೆ ಸಹಾಯಕ = 31,917 ರೂ. ಅವ್ಯವಹಾರ (ಸೇವೆಯಿಂದ ವಜಾ)
ವೆಂಕಟೇಶ್- ಸಹಾಯಕ ಉಗ್ರಾಣಿಕ = 48,658 ರೂ. ಅವ್ಯವಹಾರ (ಅಮಾನತು)
ಅಬ್ದುಲ್ ವಾಜಿದ್ – ವಾಹನ ಚಾಲಕ = 2,66,000 ರೂ. ಅವ್ಯವಹಾರ (ಅಮಾನತು)
ಕೋದಂಡರಾಮ – ಸಹಾಯಕ ಪರಿಚಾರಿಕ = 3,920 ರೂ. ಅವ್ಯವಹಾರ (ಸೇವೆಯಿಂದ ವಜಾ)

More articles

Latest article