ಸಂವಿಧಾನ ಉಳಿಸುವುದು ಭಯೋತ್ಪಾದನೆಯಾಗಿದ್ದರೆ ನಾನು ಭಯೋತ್ಪಾದಕನೇ : ಪಿಎಂ ಮೋದಿ, ಸಿಎಂ ಶಿಂಧೆ ವಿರುದ್ಧ ಠಾಕ್ರೆ ಆಕ್ರೋಶ

Most read

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಅರ್ಬನ್ ನಕ್ಸಲಿಸಂ ಬಗ್ಗೆ ಮಾತನಾಡುತ್ತಾರೆ. ಪ್ರಜಾಪ್ರಭುತ್ವವನ್ನು ಉಳಿಸುವುದು ಭಯೋತ್ಪಾದನೆಯಾಗಿದ್ದರೆ, ನಾನು ಭಯೋತ್ಪಾದಕನೇ. ಸಂವಿಧಾನ ಮತ್ತು ದೇಶವನ್ನು ಉಳಿಸುವುದು ಭಯೋತ್ಪಾದನೆಯಾಗಿದ್ದರೆ ನಾನೊಬ್ಬ ಭಯೋತ್ಪಾದಕ ಎಂದುಕೊಳ್ಳಿ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.

ವಿರೋಧ ಪಕ್ಷದ ನಾಯಕರ ವಿರುದ್ಧ ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವುದು “ಸರ್ಕಾರಿ ನಕ್ಸಲಿಸಂ” ಎಂದು ಹೇಳಿರುವ ಉದ್ಧವ್ ಠಾಕ್ರೆ, “ಇದು ನಿಜಕ್ಕೂ ನಕ್ಸಲಿಸಂ. ಇದು ಅರ್ಬನ್ ನಕ್ಸಲಿಸಂಗಿಂತಲೂ ಅಪಾಯಕಾರಿ. ಇದು ವಿರೋಧ ಪಕ್ಷಗಳನ್ನು ಒಡೆಯಲು, ಉತ್ತಮ ಸರ್ಕಾರವನ್ನು ಉರುಳಿಸಲು ನಿಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಕ್ರಮವಾಗಿದೆ. ಇದು ನಕ್ಸಲಿಸಂ, ಇದು ಪ್ರಜಾಪ್ರಭುತ್ವವನ್ನು ಕೊಲ್ಲುತ್ತದೆ” ಎಂದು ಆರೋಪಿಸಿದ್ದಾರೆ.

ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಶಿವಸೇನೆ (ಏಕನಾಥ್ ಶಿಂಧೆ) ಅವರು ಶಿವಸೇನೆ ಸಂಸ್ಥಾಪಕ ದಿವಂಗತ ಬಾಳಾಸಾಹೇಬ್ ಠಾಕ್ರೆ ಅವರ ಫೋಟೋ ಮತ್ತು ಪಕ್ಷದ ಚಿಹ್ನೆಯಾದ ‘ಬಿಲ್ಲು ಮತ್ತು ಬಾಣ’ವನ್ನು ಬಳಸದೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಉದ್ಧವ್ ಠಾಕ್ರೆ ಸವಾಲು ಹಾಕಿದ್ದಾರೆ.

ಅಕ್ಟೋಬರ್‌ನಲ್ಲಿ ಮಹಾರಾಷ್ಟ್ರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಪ್ರಚಾರವನ್ನು ಈಗಲೇ ಪ್ರಾರಂಭಿಸುವಂತೆ ಶಿವಸೇನೆ (ಯುಬಿಟಿ) ಮುಖ್ಯಸ್ಥ ಪ್ರಧಾನಿ ನರೇಂದ್ರ ಮೋದಿಯವರಿಗೆ ಸವಾಲು ಹಾಕಿದ್ದಾರೆ.

More articles

Latest article