ವಿವಿಧತೆಯಲ್ಲಿ ಏಕತೆಯೇ ಭಾರತದ ರಾಷ್ಟ್ರಭಾಷೆ; ಡಿಎಂಕೆ ಸಂಸದೆ ಕನಿಮೋಳಿ ತೀಕ್ಷ್ಣ ಉತ್ತರ

Most read

ನವದೆಹಲಿ: ಭಾರತದ ರಾಷ್ಟ್ರಭಾಷೆ ಯಾವುದು ಎಂಬ ಪ್ರಶ್ನೆಗೆ ʼವಿವಿಧತೆಯಲ್ಲಿ ಏಕತೆʼ ಎಂದು ಉತ್ತರಿಸುವ ಮೂಲಕ ಡಿಎಂಕೆ ಸಂಸದೆ ತೀಕ್ಷ್ಣ ಉತ್ತರ ನೀಡುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಆಪರೇಷನ್‌ ಸಿಂಧೂರ ಕುರಿತು ಜಗತ್ತಿನ ವಿವಿಧ ರಾಷ್ಟ್ರಗಳಿಗೆ ಮನವರಿಕೆ ಮಾಡಿಕೊಡಲು ತೆರಲೀರುವ ನಿಯೋಗವೊಂದರ ಮಖ್ಯಸ್ಥೆಯಾದ ಕನಿಮೋಳಿ ಅವರು ಈ ಉತ್ತರ ನೀಡಿದ್ದಾರೆ.

ಮ್ಯಾಡ್ರಿಡ್‌ ನಲ್ಲಿರುವ ಭಾರತೀಯ ವಲಸಿಗರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಭಾರತದ ರಾಷ್ಟ್ರೀಯ ಭಾಷೆ ವಿವಿಧತೆಯಲ್ಲಿ ಏಕತೆ. ಈ ನಿಯೋಗವು ಜಗತ್ತಿಗೆ ನೀಡಿದ ಸಂದೇಶವೇ ಅದು. ಅದು ಇಂದಿನ ಅತ್ಯಂತ ಮುಖ್ಯವಾದ ವಿಷಯ ಎಂದು ಖಡಕ್‌ ಉತ್ತರ ನೀಡಿದ್ದಾರೆ.

ಮುಂದುವರೆದು, ಭಯೋತ್ಪಾದನೆ ಕುರಿತ ಪ್ರಶ್ನೆಗೆ ಉತ್ತರಿಸುತ್ತಾ  ನಮ್ಮ ದೇಶದಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಬೇಕಾಗಿದೆ. ಆದರೆ ಭಯೋತ್ಪಾದನೆಯಿಂದ ಗಮನ ಬೇರೆಡೆ ಸಾಗುತ್ತಿದೆ. ಯುದ್ಧವು ಸಂಪೂರ್ಣವಾಗಿ ಅನಗತ್ಯ ವಾದರೂ ನಾವು ಭಯೋತ್ಪಾದನೆಯನ್ನು ಎದುರಿಸಬೇಕಾಗಿರುವುದು ಅನಿವಾರ್ಯ. ಭಾರತ ಸುರಕ್ಷಿತ ಸ್ಥಳವಾಗಿದೆ ಮತ್ತು ಕಾಶ್ಮೀರ ಸುರಕ್ಷಿತವಾಗಿದೆ ಎಂಬುದನ್ನು ಸರ್ಕಾರ ಖಚಿತಪಡಿಸುತ್ತದೆ ಎಂದು ಡಿಎಂಕೆ ಸಂಸದೆ ಒತ್ತಿ ಹೇಳಿದ್ದಾರೆ.

ಭಾರತೀಯರಾಗಿ ನಾವು ಭಾರತ ಸುರಕ್ಷಿತವಾಗಿದೆ ಎಂಬ ಸಂದೇಶ ಸಾರಬೇಕಿದೆ. ಪಾಕಿಸ್ತಾನ ಏನೆಲ್ಲಾ ಪ್ರಯತ್ನ ಮಾಡಬಹುದು. ಆದರೆ, ಅವರು ನಮ್ಮನ್ನು  ದಾರಿತಪ್ಪಿಸಲು ಸಾಧ್ಯವಿಲ್ಲ. ಕಾಶ್ಮೀರ ಸುರಕ್ಷಿತ ಸ್ಥಳವಾಗಿ ಉಳಿಯುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

ಕನಿಮೋಳಿ ನೇತೃತ್ವದ ನಿಯೋಗದ ಐದು ರಾಷ್ಟ್ರಗಳ ಭೇಟಿಯ ಕೊನೆಯ ಹಂತ ಸ್ಪೇನ್ ಆಗಿದ್ದು, ನಂತರ ಅದು ಭಾರತಕ್ಕೆ ಮರಳಲಿದೆ. ತಂಡದಲ್ಲಿ ಸಮಾಜವಾದಿ ಪಕ್ಷದ ಸಂಸದ ರಾಜೀವ್ ಕುಮಾರ್ ರೈ, ಬಿಜೆಪಿಯ ಬ್ರಿಜೇಶ್ ಚೌಟಾ, ಎಎಪಿಯ ಅಶೋಕ್ ಮಿತ್ತಲ್, ಆರ್‌ಜೆಡಿಯ ಪ್ರೇಮ್ ಚಂದ್ ಗುಪ್ತಾ ಮತ್ತು ಮಾಜಿ ರಾಜತಾಂತ್ರಿಕ ಮಂಜೀವ್ ಸಿಂಗ್ ಪುರಿ ಇದ್ದಾರೆ.

More articles

Latest article