ಮಹಿಳೆಯರ ರಹಸ್ಯ ಚಿತ್ರೀಕರಣ; ಘನತೆಗೆ ಚ್ಯುತಿಯುಂಟಾದರೆ ದೂರು ದಾಖಲಿಸಿ;ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಅವರಿಗೆ ಕಿರುಕುಳ ನೀಡುವುದು, ವಿಡಿಯೋಗಳನ್ನು ಜಾಲತಾಣಗಳಲ್ಲಿ ಶೇರ್‌ ಮಾಡಿ ಅವರ ಮಾನಹಾನಿ ಮಾಡುವುದು ಮಹಿಳೆಯರ ಗೌರವಕ್ಕೆ ಧಕ್ಕೆಯುಂಟು ಮಾಡುತ್ತದೆ. ಇದು ನಮ್ಮ ಕರ್ನಾಟಕದ ಪರಂಪರೆಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಬೆಂಗಳೂರಿನ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಮತ್ತು ಚರ್ಚ್ ಸ್ಟ್ರೀಟ್ ಗಳಲ್ಲಿ ಮಹಿಳೆಯರು ಮತ್ತು ಯುವತಿಯರ ಅಂಗಾಂಗಳನ್ನು ಫೋಕಸ್ ಮಾಡಿ ರಹಸ್ಯವಾಗಿ ವಿಡಿಯೋ ಚಿತ್ರೀಕರಿಸುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ಹೇಳಿಕೆ ನೀಡಿದ್ದಾರೆ.

ಕಳೆದ ಕೆಲವು ದಿನಗಳಲ್ಲಿ ಇಂತಹ ಸಾಕಷ್ಟು ಘಟನೆಗಳು ಬೆಳಕಿಗೆ ಬಂದಿದ್ದು, ತಕ್ಷಣವೇ ಕೃತ್ಯ ಎಸಗಿದವರನ್ನು ಬಂಧಿಸುವುದು ಸೇರಿದಂತೆ ಎಲ್ಲಾ ಅಗತ್ಯ ಕಾನೂನು ಕ್ರಮಗಳನ್ನು ಸರ್ಕಾರ ಜರುಗಿಸಿದೆ. ಇದರ ಜೊತೆಗೆ ನಾವು ಇಂತಹ ಕೃತ್ಯಗಳ ಮೇಲೆ ತೀವ್ರ ನಿಗಾ ವಹಿಸಿದ್ದೇವೆ.

ಮಹಿಳೆಯರು ಕೀಳುದೃಷ್ಟಿಯ ಅಥವಾ ಯಾವುದೇ ತರನಾದ ಕಿರುಕುಳಗಳ ಭಯವಿಲ್ಲದೆ ಧೈರ್ಯವಾಗಿ ನಡೆಯಲಾರದ ಸ್ಥಿತಿಗೆ ನಮ್ಮ ಸಮಾಜ ಹೋಗುತ್ತಿದೆ ಎಂದಾದರೆ, ನಾಗರಿಕರಾಗಿ ನಾವು ಯಾವ ದಿಕ್ಕಿನಲ್ಲಿ ಸಾಗುತ್ತಿದ್ದೇವೆ? ಎಂಬುದನ್ನು ಎಲ್ಲರೂ ತಮ್ಮ ಆತ್ಮಸಾಕ್ಷಿಯನ್ನೊಮ್ಮೆ ಪ್ರಶ್ನಿಸಿಕೊಳ್ಳಬೇಕಿದೆ. ಇವು ನಮ್ಮ ಸಾಮಾಜಿಕ ಮೌಲ್ಯಗಳಿಗೆ ವಿರುದ್ಧವಾದವು ಮಾತ್ರವಲ್ಲ, ಕಾನೂನಿನ ರೀತಿಯಲ್ಲಿ ಶಿಕ್ಷಾರ್ಹ ಅಪರಾಧಗಳ ಕೂಡ ಹೌದು.

ನಾಡಿನ ಮಹಿಳೆಯರ ಜೊತೆ ನಮ್ಮ ಸರ್ಕಾರ ದೃಢವಾಗಿ ನಿಂತಿದೆ, ನಿಮ್ಮ ಸುರಕ್ಷೆ ಮತ್ತು ಘನತೆ ನಮ್ಮ ಸರ್ಕಾರದ ಆಧ್ಯತೆಯಾಗಿದೆ. ನಿಮ್ಮ ಮೇಲಿನ ದೌರ್ಜನ್ಯಗಳ ವಿರುದ್ಧ ತೀಕ್ಷ್ಣ ಪ್ರತಿಕ್ರಿಯೆಗೆ ನಾವು ಬದ್ಧರಿದ್ದೇವೆ ಎಂಬುದನ್ನು ನಾಡಿನ ನನ್ನ ಎಲ್ಲಾ ತಾಯಂದಿರಿಗೆ, ಅಕ್ಕತಂಗಿಯರಿಗೆ ತಿಳಿಸಲು ಬಯಸುತ್ತೇನೆ.

ಯಾರೇ ಆಗಲಿ ಮಹಿಳೆಯರ ಘನತೆಗೆ ಚ್ಯುತಿಯುಂಟು ಮಾಡುವ ವಿಡಿಯೋಗಳು ಅಥವಾ ಖಾತೆಗಳನ್ನು ಆನ್‌ಲೈನ್‌ನಲ್ಲಿ ನೋಡಿದರೆ, ತಕ್ಷಣವೇ ಸೈಬರ್ ಸೆಲ್‌ನ ದೂರವಾಣಿ ಸಂಖ್ಯೆ: 1930ಗೆ ಕರೆಮಾಡಿ ಅಥವಾ ವೆಬ್‌ಸೈಟ್: cybercrime.gov.in ನಲ್ಲಿ ದೂರು ದಾಖಲಿಸಿ. ನಾವು ನೀವೆಲ್ಲರೂ ಜೊತೆಗೂಡಿ ಪ್ರತಿ ಮಹಿಳೆಯೂ ಸುರಕ್ಷಿತವಾಗಿ, ಗೌರವದಿಂದ ಮತ್ತು ಸ್ವಾತಂತ್ರ್ಯದಿಂದ ಬದುಕುವ ಶ್ರೇಷ್ಠ ಕರ್ನಾಟಕವನ್ನು ನಿರ್ಮಿಸೋಣ ಎಂದಿದ್ದಾರೆ.

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಅವರಿಗೆ ಕಿರುಕುಳ ನೀಡುವುದು, ವಿಡಿಯೋಗಳನ್ನು ಜಾಲತಾಣಗಳಲ್ಲಿ ಶೇರ್‌ ಮಾಡಿ ಅವರ ಮಾನಹಾನಿ ಮಾಡುವುದು ಮಹಿಳೆಯರ ಗೌರವಕ್ಕೆ ಧಕ್ಕೆಯುಂಟು ಮಾಡುತ್ತದೆ. ಇದು ನಮ್ಮ ಕರ್ನಾಟಕದ ಪರಂಪರೆಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಬೆಂಗಳೂರಿನ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಮತ್ತು ಚರ್ಚ್ ಸ್ಟ್ರೀಟ್ ಗಳಲ್ಲಿ ಮಹಿಳೆಯರು ಮತ್ತು ಯುವತಿಯರ ಅಂಗಾಂಗಳನ್ನು ಫೋಕಸ್ ಮಾಡಿ ರಹಸ್ಯವಾಗಿ ವಿಡಿಯೋ ಚಿತ್ರೀಕರಿಸುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ಹೇಳಿಕೆ ನೀಡಿದ್ದಾರೆ.

ಕಳೆದ ಕೆಲವು ದಿನಗಳಲ್ಲಿ ಇಂತಹ ಸಾಕಷ್ಟು ಘಟನೆಗಳು ಬೆಳಕಿಗೆ ಬಂದಿದ್ದು, ತಕ್ಷಣವೇ ಕೃತ್ಯ ಎಸಗಿದವರನ್ನು ಬಂಧಿಸುವುದು ಸೇರಿದಂತೆ ಎಲ್ಲಾ ಅಗತ್ಯ ಕಾನೂನು ಕ್ರಮಗಳನ್ನು ಸರ್ಕಾರ ಜರುಗಿಸಿದೆ. ಇದರ ಜೊತೆಗೆ ನಾವು ಇಂತಹ ಕೃತ್ಯಗಳ ಮೇಲೆ ತೀವ್ರ ನಿಗಾ ವಹಿಸಿದ್ದೇವೆ.

ಮಹಿಳೆಯರು ಕೀಳುದೃಷ್ಟಿಯ ಅಥವಾ ಯಾವುದೇ ತರನಾದ ಕಿರುಕುಳಗಳ ಭಯವಿಲ್ಲದೆ ಧೈರ್ಯವಾಗಿ ನಡೆಯಲಾರದ ಸ್ಥಿತಿಗೆ ನಮ್ಮ ಸಮಾಜ ಹೋಗುತ್ತಿದೆ ಎಂದಾದರೆ, ನಾಗರಿಕರಾಗಿ ನಾವು ಯಾವ ದಿಕ್ಕಿನಲ್ಲಿ ಸಾಗುತ್ತಿದ್ದೇವೆ? ಎಂಬುದನ್ನು ಎಲ್ಲರೂ ತಮ್ಮ ಆತ್ಮಸಾಕ್ಷಿಯನ್ನೊಮ್ಮೆ ಪ್ರಶ್ನಿಸಿಕೊಳ್ಳಬೇಕಿದೆ. ಇವು ನಮ್ಮ ಸಾಮಾಜಿಕ ಮೌಲ್ಯಗಳಿಗೆ ವಿರುದ್ಧವಾದವು ಮಾತ್ರವಲ್ಲ, ಕಾನೂನಿನ ರೀತಿಯಲ್ಲಿ ಶಿಕ್ಷಾರ್ಹ ಅಪರಾಧಗಳ ಕೂಡ ಹೌದು.

ನಾಡಿನ ಮಹಿಳೆಯರ ಜೊತೆ ನಮ್ಮ ಸರ್ಕಾರ ದೃಢವಾಗಿ ನಿಂತಿದೆ, ನಿಮ್ಮ ಸುರಕ್ಷೆ ಮತ್ತು ಘನತೆ ನಮ್ಮ ಸರ್ಕಾರದ ಆಧ್ಯತೆಯಾಗಿದೆ. ನಿಮ್ಮ ಮೇಲಿನ ದೌರ್ಜನ್ಯಗಳ ವಿರುದ್ಧ ತೀಕ್ಷ್ಣ ಪ್ರತಿಕ್ರಿಯೆಗೆ ನಾವು ಬದ್ಧರಿದ್ದೇವೆ ಎಂಬುದನ್ನು ನಾಡಿನ ನನ್ನ ಎಲ್ಲಾ ತಾಯಂದಿರಿಗೆ, ಅಕ್ಕತಂಗಿಯರಿಗೆ ತಿಳಿಸಲು ಬಯಸುತ್ತೇನೆ.

ಯಾರೇ ಆಗಲಿ ಮಹಿಳೆಯರ ಘನತೆಗೆ ಚ್ಯುತಿಯುಂಟು ಮಾಡುವ ವಿಡಿಯೋಗಳು ಅಥವಾ ಖಾತೆಗಳನ್ನು ಆನ್‌ಲೈನ್‌ನಲ್ಲಿ ನೋಡಿದರೆ, ತಕ್ಷಣವೇ ಸೈಬರ್ ಸೆಲ್‌ನ ದೂರವಾಣಿ ಸಂಖ್ಯೆ: 1930ಗೆ ಕರೆಮಾಡಿ ಅಥವಾ ವೆಬ್‌ಸೈಟ್: cybercrime.gov.in ನಲ್ಲಿ ದೂರು ದಾಖಲಿಸಿ. ನಾವು ನೀವೆಲ್ಲರೂ ಜೊತೆಗೂಡಿ ಪ್ರತಿ ಮಹಿಳೆಯೂ ಸುರಕ್ಷಿತವಾಗಿ, ಗೌರವದಿಂದ ಮತ್ತು ಸ್ವಾತಂತ್ರ್ಯದಿಂದ ಬದುಕುವ ಶ್ರೇಷ್ಠ ಕರ್ನಾಟಕವನ್ನು ನಿರ್ಮಿಸೋಣ ಎಂದಿದ್ದಾರೆ.

More articles

Latest article

Most read